News Karnataka Kannada
Sunday, April 28 2024
ಮಂಗಳೂರು

ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತ

Bantwal
Photo Credit :
ಬಂಟ್ವಾಳ : ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಬೆಂಗಳೂರು ನಿವಾಸಿಯೊಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಭಾನುವಾರ ಮುಂಜಾನೆ ಮಾಣಿ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಬೆಂಗಳೂರು ಜೆ.ಸಿ.ನಗರದ ಕುರುಬರಹಳ್ಳಿ ನಿವಾಸಿ ಲಕ್ಷ್ಮಣ ಆಚಾರಿ (65) ಮೃತರಾಗಿದ್ದಾರೆ. ಚಾಲಕ ಪ್ರಜ್ವಲ್ (22) ಸಹಿತ ನಾಲ್ವರು ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ಬರುತ್ತಿದ್ದ ಕಾರನ್ನು ಪ್ರಜ್ವಲ್ ಚಲಾಯಿಸುತ್ತಿದ್ದು , ಲಕ್ಷ್ಮಣ ಆಚಾರಿ ಅವರು ಪುತ್ರಿಯ ವಿವಾಹ ಆಮಂತ್ರಣ ನೀಡುವ ನಿಟ್ಟಿನಲ್ಲಿ ಊರಿಗೆ ಆಗಮಿಸುತ್ತಿದ್ದರೆನ್ನಲಾಗಿದೆ.
ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರಿನವರಿಗೆ ಮಾಣಿ ಜಂಕ್ಷನ್ ನಲ್ಲಿ ರಸ್ತೆ ತಪ್ಪಿ ಬೆಂಗಳೂರು ಮಾರ್ಗದಲ್ಲಿ ಮುಂದುವರಿದ್ದಾರೆ. ಈ ಸಮಯ ಬುಡೋಳಿ ಎಂಬಲ್ಲಿ ಈ ಅಪಘಾತ ನಡೆದಿದೆ.
ಪ್ರೆಂಡ್ಸ್ ವಿಟ್ಲ ತಂಡ ವಾಹನವನ್ನು ಸ್ಥಳದಿಂದ ತೆರವು ಮಾಡಿ ಠಾಣೆಗೆ ತಲುಪಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು