ಉಜಿರೆ : ಭಾರತ ರ್ಕಾರದ ಶಿಕ್ಷಣ ಸಚಿವಾಲಯ,ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಪರಿಷತ್ ,ಉನ್ನತ ಶಿಕ್ಷಣ ಇಲಾಖೆಯಿಂದ ಸ್ವಚ್ಛತಾ ಕರ್ಯ ಯೋಜನೆಯಡಿಯಲ್ಲಿ ಕೊಡುವ ಜಿಲ್ಲಾ ಹಸಿರು ಚಾಂಪಿಯನ್ ೨೦೨೧-೨೨ ಪ್ರಶಸ್ತಿಯನ್ನು ಉಜಿರೆಯ ಎಸ್ ಡಿ ಎಂ ಕಾಲೇಜು ಪಡೆದುಕೊಂಡಿದೆ.
ಕಾಲೇಜಿನಲ್ಲಿ ಸ್ವಚ್ಛತೆ ಮತ್ತು ನರ್ಮಲ್ಯತೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಕೈಗೊಂಡ ಉಪಕ್ರಮಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಶೈಕ್ಷಣಿಕ ಸಂಸ್ಥೆಗಳು ಕಾಲೇಜು ಕ್ಯಾಂಪಸ್ ನಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ನರ್ವಹಣೆಯ ಕುರಿತು ಕೈಗೊಳ್ಳುವ ಕರ್ಯಯೋಜನೆಗಳನ್ನು ಗುರುತಿಸಲು ಈ ಸ್ರ್ಧೆಯನ್ನು ನಡೆಸಲಾಗುತ್ತದೆ.ದೇಶದ ಎಲ್ಲ ರಾಜ್ಯಗಳ ಶಿಕ್ಷಣಸಂಸ್ಥೆಗಳು ತಮ್ಮ ಕ್ಯಾಂಪಸ್ ನಲ್ಲಿ ನರ್ವಹಿಸುವ ಸ್ವಚ್ಛತಾಕ್ರಮಗಳ ಬಗ್ಗೆ ಸಮಗ್ರ ವರದಿ ಹಾಗೂ ಸಾಕ್ಷ್ಯಚಿತ್ರವನ್ನು ಕಳುಹಿಸುತ್ತವೆ. ಅದರಲ್ಲಿ ಉಜಿರೆಯ ಎಸ್ ಡಿ ಎಂ ಶಿಕ್ಷಣ ಸಂಸ್ಥೆ ಪ್ರಶಸ್ತಿ ಗಳಿಸಿದೆ.
ಎಸ್ ಡಿ ಎಂ ಸಂಸ್ಥೆಯಲ್ಲಿ ಸ್ವಚ್ಚತೆ ಮತ್ತು ತ್ಯಾಜ್ಯ ನರ್ವಹಣೆಗೆ ರಚನಾತ್ಮಕ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಪ್ರತಿ ತರಗತಿಯಿಂದ ಕಸವನ್ನು ಸಂಗ್ರಹಿಸಿ,ತ್ಯಾಜ್ಯ ವಿಂಗಡಣಾ ಘಟಕಕ್ಕೆ ರ್ಗಾಯಿಸಲಾಗುತ್ತದೆ. ಅಲ್ಲಿ ಉಪಯೋಗಕ್ಕೆ ಯೋಗ್ಯ, ಮರುಬಳಕೆ ಮಾಡಬಹುದಾದ ವಸ್ತುಗಳನ್ನು ಪ್ರತ್ಯೇಕವಾಗಿ ವಿಂಗಡಿಸಲಾಗುತ್ತದೆ.ಜೊತೆಗೆ ಪ್ರತಿ ತರಗತಿಯಿಂದ ಸ್ವಚ್ಛತಾ ರಾಯಭಾರಿಯನ್ನು ಆಯ್ಕೆಮಾಡಿ ತರಗತಿ ಸ್ವಚ್ಛತೆಯ ಬಗ್ಗೆಯೂ ಗಮನಹರಿಸಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಹಾಯಕ ಪ್ರಾಧ್ಯಾಪಕರು ಮತ್ತು ಎನ್ ಎಸ್ ಎಸ್ ಯೋಜನಾಧಿಕಾರಿ ಲಕ್ಷ್ಮಿನಾರಾಯಣ ಕೆ ಎಸ್, “ಕಾಲೇಜಿನಲ್ಲಿ ಸ್ವಚ್ಛತೆ ಮತ್ತು ನರ್ಮಲ್ಯಕ್ಕೆ ಸಂಬಂಧಿಸಿದ ಕರ್ಯ-ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ.ಇದರಿಂದಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗಳಿಸಲು ಸಾಧ್ಯವಾಗಿದೆ..ಈ ಹಂತದಲ್ಲಿ ಸಹಕರಿಸಿದ ಪ್ರಾಂಶುಪಾಲರು, ಉಪನ್ಯಾಸಕರು ವಿದ್ಯರ್ಥಿಗಳಿಗೆ ತುಂಬು ಹೃದಯದ ಧನ್ಯವಾದ. ಬರೀ ಕಾಲೇಜು ಮಾತ್ರವಲ್ಲದೇ ಉಜಿರೆ ಗ್ರಾಮದಲ್ಲೂ ಕೂಡ ಸಾಮುದಾಯಿಕ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ.” ಎಂದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…