News Karnataka Kannada
Monday, May 06 2024
ಮಂಗಳೂರು

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಹಾರ ಮೇಳ ಸಂಭ್ರಮ

Sdm
Photo Credit : News Kannada

ಉಜಿರೆ : ಜೀವನ ವಿಜ್ಞಾನ ಪ್ರತಿಯೊಬ್ಬರ ವೈಯಕ್ತಿಕ ಬದುಕನ್ನು ರೂಪಿಸಿಕೊಳ್ಳಲು ದಿನನಿತ್ಯದ ಚಟುವಟಿಕೆಗಳನ್ನು ಶಿಸ್ತು ಮತ್ತು ಕ್ರಮಬದ್ಧವಾಗಿ ನರ‍್ವಹಿಸಲು ಸಹಕಾರಿಯಾಗಿದೆ ಎಂದು ಶ್ರೀ.ಧ.ಮ.ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸಲೀಪ್ ಕುಮಾರಿ ಅಭಿಪ್ರಾಯಪಟ್ಟರು.

ಇವರು ಇತ್ತೀಚಿಗೆ ನಡೆದ ಉಜಿರೆಯ ಶ್ರೀ.ಧ.ಮ. ಪದವಿ ಕಾಲೇಜಿನ ಗೃಹ ವಿಜ್ಞಾನ ವಿಭಾಗ ರ‍್ಪಡಿಸಿದ್ದ ಆಹಾರಮೇಳ ಕಾರ‍್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಲಿಕೆಯ ಜ್ಞಾನಕ್ಕೆ ಹೆಣ್ಣು-ಗಂಡೆಂಬ ತಾರತಮ್ಯವಿಲ್ಲ. ಅಡುಗೆ ತಯಾರಿಸುವಿಕೆ, ಮನೆಯ ನರ‍್ವಹಿಸುವಿಕೆ ಪ್ರತಿಯೊಬ್ಬರೂ ಕಲಿತುಕೊಳ್ಳಬೇಕು. ಅಡುಗೆಮನೆ ಹೆಣ್ಣಿಗೆ ಮಾತ್ರ ಸೀಮಿತವಾಗಬಾರದು ಎಂದು ಅಭಿಪ್ರಾಯಪಟ್ಟರು.

ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಉದಯಚಂದ್ರ ಪ್ರತಿಯೊಬ್ಬರಿಗೂ ಅವಶ್ಯಕವಾಗಿರುವ ಜೀವನ ಪಾಠ ಇಂದು ವಿಭಾಗವಾಗಿ ಬೋಧಿಸುವ ಅಧ್ಯಾಯವಾಗಿ ಮರ‍್ಪಟ್ಟಿದೆ, ದೇಶಿಯ ಆಹಾರಗಳ ಮಹತ್ವ ಅರಿತುಕೊಳ್ಳಬೇಕು ಎಂದು ನುಡಿದರು.

ಕಾರ‍್ಯಕ್ರಮದಲ್ಲಿ ಸ್ವತಃ ವಿದ್ಯರ‍್ಥಿಗಳು ತಯಾರಿಸಿದ ನಾನಾ ರೀತಿಯ ಆಹಾರ ಪದರ‍್ಥಗಳನ್ನು ಪ್ರರ‍್ಶಿಸಿ ವ್ಯವಹಾರ ಶೈಲಿಯಲ್ಲಿ ಖರೀದಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ಕಾರ‍್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯರ‍್ಥಿಗಳು ಭಾಗಿಯಾಗಿದ್ದರು. ವೇದಿಕೆಯಲ್ಲಿ ಗೃಹ
ವಿಜ್ಞಾನ ವಿಭಾಗ ಮುಖ್ಯಸ್ಥೆ ಯಾದ ಸಹಪ್ರಾಧ್ಯಾಪಕಿ ಶೋಭಾ ಹಾಗೂ ಕಾಲೇಜಿನ ಅಕೌಂಟ್ಸ್ ಸೂಪರಿಡೆಂಟ್ ಯುವರಾಜ್ ಪೂವಣೆ ಉಪಸ್ಥಿತರಿದ್ದರು. ವಿದ್ಯರ‍್ಥಿ ದೀಪ ನಿರೂಪಿಸಿ, ಲಾವಣ್ಯ ಸ್ವಾಗತಿಸಿ, ತೃಪ್ತಿ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು