ಮಂಗಳೂರು: ಸುಳ್ಯ ತಾಲೂಕಿನ 65 ವರ್ಷದ ಪುರುಷನಿಗೆ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಅವರಿಗೆ ವಿಪ್ಪಲ್ ಪಿಡಿ (WHIPPLEPD) ಎಂಬ ಸಂಕಿರ್ಣ ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು, ಇದು ಬಹು ಅಂಗಗಳನ್ನು ತೆಗೆಯುವ ಮತ್ತು ಪುನರ್ ನಿರ್ಮಾಣದ ಪ್ರಕ್ರಿಯೆಯನ್ನು
ಒಳಗೊಂಡಿರುತ್ತದೆ.
ಅತ್ಯಾಧುನಿಕ ರೋಬೋಟ್ ನೊಂದಿಗೆ ಎ.ಜೆ. ಆಸ್ಪತ್ರೆಯ ಗ್ಯಾಸ್ಟ್ರೋ ಅಂಕೊ ಸರ್ಜನ್ ಗಳಾದ ಡಾ. ರೋಹನ್ ಶೆಟ್ಟಿ
ಮತ್ತು ಡಾ. ಅಶ್ವಿನ್ ಆಳ್ವ ಈ ಶಸ್ತ್ರಕ್ರಿಯೆಯನ್ನು ಯಶಸ್ವಿಯಾಗಿ ಮಾಡಿದರು ಹಾಗೂ ಅರಿವಳಿಕೆ ತಜ್ಞ ಡಾ. ಹರೀಶ್ ಕಾರಂತ್ ಮತ್ತು ವೈದ್ಯಕೀಯ
ಗ್ಯಾಸ್ಟ್ರೋಎಂಟರಾಜಿಸ್ಟ್ ಡಾ. ರಾಘವೇಂದ್ರ ಪ್ರಸಾದ್ ಸಹಕರಿಸಿದರು. ರೋಗಿಯು ಯಾವುದೇ ತೊಂದರೆಗಳಿಲ್ಲದೆ ಶಸ್ತ್ರಚಿಕಿತ್ಸೆಯ ನಂತರ
ಕೇವಲ 7 ದಿನಗಳೊಳಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಇದು ಕರಾವಳಿ ಕರ್ನಾಟಕದ ಮೊತ್ತಮೊದಲ ರೋಬೋಟಿಕ್ ವಿಪ್ಪಲ್ ಶಸ್ತ್ರಚಿಕಿತ್ಸೆಯಾಗಿದ್ದು, ಇದುವರೆಗೆ ಭಾರತದಲ್ಲಿ ಕೆಲವೇ ಕೇಂದ್ರಗಳು ಈ
ಮೈಲಿಗಲ್ಲನ್ನು ಸಾಧಿಸಿವೆ. ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರವು ಕರಾವಳಿ ಕರ್ನಾಟಕದ ಜನರ ಪ್ರಯೋಜನಕ್ಕಾಗಿ ಭವಿಷ್ಯದಲ್ಲಿ
ಇನ್ನೂ ಅನೇಕ ಸುಧಾರಿತ ಶಸ್ತ್ರಚಿಕಿತ್ಸೆಗಳನ್ನು ಮಾಡಲು ಬಯಸುತ್ತದೆ.
ರೊಬೊಟಿಕ್ ಶಸ್ತ್ರಚಿಕಿತ್ಸೆಗಳು ವೈದ್ಯಕೀಯ ವಿಜ್ಞಾನದ ಇತ್ತೀಚಿನ ಆವಿಷ್ಕಾರವಾಗಿದ್ದು, ಬೇಗನೆ ಗುಣವಾಗುವ, ಕಡಿಮೆ ಅಸ್ವಸ್ಥತೆಗಳ, ಅತ್ಯಂತ
ನಿಖರವಾದ ಶಸ್ತ್ರಚಿಕಿತ್ಸೆ ಮಾಡುವಲ್ಲಿ ಸಹಾಯಕವಾಗಿದೆ.ಎ.ಜೆ. ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳು ಹಾಗೂ ಪರಿಣತಿಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಮ್ಮ ಗೌರವಾನ್ವಿತ
ಮಾಧ್ಯಮದಲ್ಲಿ ಪ್ರಟಿಸಬೇಕಾಗಿ ವಿನಂತಿ.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…
ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…
ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…
ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…
ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…
ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…