News Karnataka Kannada
Monday, May 06 2024
ಮಂಗಳೂರು

ಒಡ್ಡೂರು ಫಾರ್ಮ್ಸ್ ಗೆ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರು ಭೇಟಿ

Bantwal
Photo Credit :
ಬಂಟ್ವಾಳ : ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾದ  ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರು ಭಾನುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ  ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು.
ಈ ಸಂದರ್ಭ ದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ವತಿಯಿಂದ  ಶ್ರೀ ಕಟೀಲು ಮೇಳದಿಂದ ನಡೆಯುತ್ತಿದ್ದ  ಯಕ್ಷಗಾನದಲ್ಲಿ    ಶ್ರೀದೇವರ ಪ್ರಸಾದ ಸ್ವೀಕರಿಸಿದರಲ್ಲದೆ ಶಾಸಕರ ಗೋಶಾಲೆ,ಕೆರೆ ಸಹಿತ ಕೃಷಿ ಚಟುವಟಿಕೆಯನ್ನು ಕಂಡು ಸಂತಸಪಟ್ಟರು.  ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ದಂಪತಿಗಳು  ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರಿಗೆ ಭಗವದ್ಗೀತೆ  ಪುಸ್ತಕ ನೀಡಿ ಗೌರವಿಸಿದರು.
ಮಂಗಳೂರು ಉತ್ತರದ ಶಾಸಕ ಡಾ.ವೈ ಭರತ್ ಶೆಟ್ಟಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ,ಪಕ್ಷದ ಪ್ರಮುಖರಾದ ಡೊಂಬಯ ಅರಳ,ರಮಾನಾಥ ರಾಯಿ,ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು,ಗಣೇಶ್ ಸುವರ್ಣ ತುಂಬೆ, ಉಮೇಶ್ ಅರಳ,ಪಿಲಾತಬೆಟ್ಟು ಗ್ರಾಪಂ.ಅಧ್ಯಕ್ಷೆ ಹರ್ಷಿಣಿ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು