ಬಂಟ್ವಾಳ : ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾದ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರು ಭಾನುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಗೆ ಭೇಟಿ ನೀಡಿದರು.
ಈ ಸಂದರ್ಭ ದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ವತಿಯಿಂದ ಶ್ರೀ ಕಟೀಲು ಮೇಳದಿಂದ ನಡೆಯುತ್ತಿದ್ದ ಯಕ್ಷಗಾನದಲ್ಲಿ ಶ್ರೀದೇವರ ಪ್ರಸಾದ ಸ್ವೀಕರಿಸಿದರಲ್ಲದೆ ಶಾಸಕರ ಗೋಶಾಲೆ,ಕೆರೆ ಸಹಿತ ಕೃಷಿ ಚಟುವಟಿಕೆಯನ್ನು ಕಂಡು ಸಂತಸಪಟ್ಟರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ದಂಪತಿಗಳು ಸ್ಪೀಕರ್ ವಿಶ್ವೇಶ್ವರ ಹೆಗ್ಗಡೆ ಕಾಗೇರಿಯವರಿಗೆ ಭಗವದ್ಗೀತೆ ಪುಸ್ತಕ ನೀಡಿ ಗೌರವಿಸಿದರು.
ಮಂಗಳೂರು ಉತ್ತರದ ಶಾಸಕ ಡಾ.ವೈ ಭರತ್ ಶೆಟ್ಟಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ,ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೇವದಾಸ ಶೆಟ್ಟಿ,ಪಕ್ಷದ ಪ್ರಮುಖರಾದ ಡೊಂಬಯ ಅರಳ,ರಮಾನಾಥ ರಾಯಿ,ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು,ಗಣೇಶ್ ಸುವರ್ಣ ತುಂಬೆ, ಉಮೇಶ್ ಅರಳ,ಪಿಲಾತಬೆಟ್ಟು ಗ್ರಾಪಂ.ಅಧ್ಯಕ್ಷೆ ಹರ್ಷಿಣಿ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.