ಮಂಗಳೂರು: ನಗರದ ಉರ್ವ ಸ್ಟೋರ್ ಬಳಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಭವನಕ್ಕೆ ಶನಿವಾರ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಶಿಲಾನ್ಯಾಸ ನೆರವೇರಿಸಿದರು.
ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಚಿವರು ಅಭಿವೃದ್ಧಿಗೆ ಕೊನೆ ಎಂಬುದು ಇಲ್ಲ. ಭಾಷೆ ಹಾಗೂ ಸಂಸ್ಕೃತಿಗೆ ಒಂದಕ್ಕೊಂದು ಕೊಂಡಿಯಾಗಿ ಕೆಲಸ ಮಾಡುತ್ತದೆ. ಒಂದು ನಾಗರಿಕ ಸಂಸ್ಕೃತಿ ಚೆನ್ನಾಗಿರಬೇಕೆಂದರೆ ಅಲ್ಲಿನ ಸಂಸ್ಕೃತಿಗೆ ಚೆನ್ನಾಗಿರಬೇಕು ಅದೇ ರೀತಿ ಸಂಸ್ಕೃತಿ ಚೆನ್ನಾಗಿರಬೇಕು ಎಂದರೆ ಅಲ್ಲಿನ ನಡವಳಿಕೆ ಚೆನ್ನಾಗಿರಬೇಕು ಹಾಗೂ ನಡವಳಿಕೆ ಚೆನ್ನಾಗಿರಬೇಕೆಂದರೆ ಮುಖ್ಯವಾಗಿ ಭಾಷೆ ಚೆನ್ನಾಗಿರಬೇಕು ಎಂದು ನುಡಿದರು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಡಾ. ಕೆ. ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶಾಸಕರಾದ ವೇದವ್ಯಾಸ ವೇದವ್ಯಾಸ ಕಾಮತ್, ಶಿಲಾನ್ಯಾಸದ ವಿಚಾರದಲ್ಲಿ ನಿರಂತರವಾದ ಪರಿಶ್ರಮಕ್ಕೆ ದೊರಕಿದ ಫಲ ಇದು ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮಂಗಳೂರು ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತೀನ್ ಕುಮಾರ್, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಕತ್ತಲ್ಸಾರ್, ಮಹಾನಗರ ಪಾಲಿಕೆ ಸದಸ್ಯರಾದ ಗಣೇಶ್ ಕುಲಾಲ್, ಜಯಶ್ರೀ ಹಾಗೂ ಇತರೆ ಗಣ್ಯರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.