News Karnataka Kannada
Saturday, May 04 2024
ಮಂಗಳೂರು

ಕನ್ಯಾಡಿ ಶ್ರೀರಾಮಕ್ಷೇತ್ರಕ್ಕೆ ಸಚಿವ ಸುನೀಲ್ ಕುಮಾರ್ ಭೇಟಿ

Kanyadi
Photo Credit :

ಬೆಳ್ತಂಗಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನ ಕನ್ಯಾಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ನಾರಾಯಣಗುರು ಸಭಾಭವನ ಹಾಗೂ ಅನ್ನಛತ್ರದ ಕಾಮಗಾರಿಯನ್ನು ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಸುನಿಲ್ ಕುಮಾರ್ ಅವರು ಜ.23 ರಂದು ವೀಕ್ಷಣೆ ನಡೆಸಿದರು.

ಕಾಮಗಾರಿ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದ ಸಚಿವರು, ಕಾಮಗಾರಿಗೆ ಬೇಕಾದ ಅವಧಿ ರೂಪುರೇಷೆ ಸಹಿತ ಮಾಹಿತಿ ಪಡೆದರು. ಬಳಿಕ ಸ್ವಾಮೀಜಿ ಆಶೀರ್ವಾದ ಪಡೆದರು. ಈ ವೇಳೆ ಸ್ವಾಮೀಜಿಗಳು ಸಚಿವರನ್ನು ಕ್ಷೇತ್ರದ ವತಿಯಿಂದ ಗೌರವಿಸಿದರು.

ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉದ್ಯಮಿ ಶಶಿಧರ ಶೆಟ್ಟಿ ಬರೋಡ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ರಾವ್ ಧರ್ಮಸ್ಥಳ, ಟ್ರಸ್ಟಿ ಸೇರಿದಂತೆ ಕ್ಷೇತ್ರದ ಆಡಳಿತ ಮಂಡಳಿ ಟ್ರಸ್ಟಿ ಕೃಷ್ಣಪ್ಪ ಗುಡಿಗಾರ್, ತುಕರಾಮ್ ಸಾಲ್ಯಾನ್, ಧರ್ಮಣ್ಣ ಸದಸ್ಯರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು