ಮಂಗಳೂರು : ತೆಲುಗು ಸಿನಿಮಾದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪಾ: ದಿ ರೈಸ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡಿ ದಾಖಲೆಗಳನ್ನು ಬರೆದಿದೆ.
ಅದೇ ರೀತಿ ಈ ಚಿತ್ರದ ಹಾಡುಗಳಂತೂ ಒಂದಕ್ಕಿಂತ ಒಂದು ವಿಭಿನ್ನವಾಗಿದ್ದು, ಸಿನಿಪ್ರಿಯರ ಮೆಚ್ಚುಗೆಗೆ ಕಾರಣವಾಗಿದ್ದು ಮಾತ್ರವಲ್ಲದೆ ಜನರು ಕೂಡ ಹಾಡಿಗೆ ತಮ್ಮದೇ ಆದ ಸ್ಟೆಪ್ ಗಳನ್ನು ಮಾಡಿ ಖುಷಿಪಟ್ಟಿದ್ದಾರೆ.
ಅದರಲ್ಲೂ ಈ ಚಿತ್ರದ ಶ್ರೀವಲ್ಲಿ ಹಾಡಿಗೆ ಕ್ರಿಕೆಟರ್ಸ್ ಸೇರಿದಂತೆ ಈಗಾಗಲೇ ದೇಶ ವಿದೇಶದ ಘಟಾನುಘಟಿ ಸೆಲೆಬ್ರಿಟಿಗಳು ಮನಸೋತಿದ್ದಾರೆ. ಇದೀಗ ಶ್ರೀ ವಲ್ಲಿ ಹಾಡು ನಮ್ಮ ಕರ್ನಾಟಕದ ಗಂಡುಕಲೆ ಯಕ್ಷಗಾನಕ್ಕೂ ಪ್ರವೇಶ ಮಾಡಿದೆ.
ಈ ಹಾಡನ್ನು ಯಕ್ಷಗಾನದಲ್ಲಿ ಅಳವಡಿಸಿದ್ದು ಮಾತ್ರವಲ್ಲದೆ, ಭಾಗವತರು ಹಾಡಿದ ಈ ಹಾಡಿಗೆ ಯಕ್ಷಗಾನ ಕಲಾವಿದರೊಬ್ಬರು ತಕ್ಕದಾದ ನೃತ್ಯವನ್ನು ಮಾಡುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರವಾಗಿದ್ದು ಮಾತ್ರವಲ್ಲದೆ ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿದ್ದಾರೆ.
ಇದೀಗ ಈ ನೃತ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಲೈಂಗಿಕ ದೌರ್ಜನ್ಯ ಹಾಗೂ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರನ್ನು 4 ದಿನ ಎಸ್ಐಟಿ ವಶಕ್ಕೆ…
ನಾಯಿಗಳಿಗೆ ಊಟ ಹಾಕುತ್ತಿದ್ದ ಸಂದರ್ಭದಲ್ಲಿ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಭದ್ರತಾ ಸಿಬ್ಬಂದಿ ಮೇಲೆ ಮಹಿಳೆಯೊಬ್ಬರು ದೂರು ನೀಡಿದ್ದು, ಅಶೋಕನಗರ ಠಾಣೆಯಲ್ಲಿ ಪ್ರಕರಣ…
ಕಾಶ್ಮೀರದ ಪೂಂಚ್ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು…
ಈ ಬಾರಿಯ ಲೋಕಸಭೆ ಚುನಾವಣೆ ಎರಡನೇ ಸ್ವಾತಂತ್ರ್ಯ ಸಂಗ್ರಾಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ನಡೆದಿದೆ.
ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಸಂತ ಜೆರೋಸಾ…