News Karnataka Kannada
Friday, May 03 2024
ಮಂಗಳೂರು

ಕಳಿಯ ಬದಿನಡೆ ಮತ್ತು ಮಂಜಲಡ್ಕ ದೈವಗಳ ನರ್ತನ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

New Project (2)
Photo Credit :

ಬೆಳ್ತಂಗಡಿ: ಕಳಿಯ ಗ್ರಾಮದ ಬದಿನಡೆ ಮತ್ತು ಮಂಜಲಡ್ಕ ಪರಿವಾರ ದೈವಗಳ ಸಾನಿಧ್ಯದಲ್ಲಿ ಡಿ.21 ರಿಂದ 26 ರವರೆಗೆ ನಡೆಯಲಿರುವ ಕಳಿಯ ಬದಿನಡೆಯಲ್ಲಿ ಉಳ್ಳಾಕುಲು-ಉಳ್ಳಾಲ್ತಿ ರಕ್ತೇಶ್ವರೀ, ಮಹಿಷಂತಾಯ, ಅಂಗಣ ಪಂಜುರ್ಲಿ ದೈವಗಳ ಮತ್ತು  ಮಂಜಲಡ್ಕ ದೈವಸ್ಥಾನದಲ್ಲಿ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ ಹಾಗೂ ಕಲ್ಕುಡ ದೈವಗಳ ಪ್ರತಿಷ್ಠಾ ಮಹೋತ್ಸವ ಕಲಶಾಭಿಷೇಕ ಮತ್ತು ನರ್ತನ ಸೇವೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು(ಡಿ.7) ಜರುಗಿತು.

ಕಲಶಾಭಿಷೇಕ ಸಮಿತಿ ಗೌರವಾಧ್ಯಕ್ಷ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಘವೇಂದ್ರ ಭಾಂಗಿಣ್ಣಾಯ, ಕಾರ್ಯಾಧ್ಯಕ್ಷ ಸುರೇಂದ್ರ ಕುಮಾರ್ ಕಳಿಯಬೀಡು, ಅಧ್ಯಕ್ಷ ಸುವರ್ಣೇಂದ್ರ ಜೈನ್ ಕಳಿಯಬೀಡು, ಪ್ರಧಾನ ಕಾರ್ಯದರ್ಶಿ ಸತ್ಯೇಂದ್ರ ಕುಮಾರ್ ಕಳಿಯಬೀಡು, ಕೋಶಾಧಿಕಾರಿ ಕೂಸಪ್ಪ ಗೌಡ, ಕಲಶಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ವಸಂತ ಮಜಲು, ಅಧ್ಯಕ್ಷ ಕೇಶವ ಬಂಗೇರ, ಪ್ರಧಾನ ಕಾರ್ಯದರ್ಶಿ ಸದಾನಂದ ಶೆಟ್ಟಿ, ಕೋಶಾಧಿಕಾರಿ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಕಳಿಯ ಗ್ರಾ.ಪಂ ಅಧ್ಯಕ್ಷೆ ಸುಭಾಷಿಣಿ ಗೌಡ, ನಾಳ ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಪ್ರಧಾನ ಅರ್ಚಕ ರಾಘವೇಂದ್ರ ಅಸ್ರಣ್ಣ, ಕಲಶಾಭಿಷೇಕ ಸಮಿತಿ ಮತ್ತು ಜೀರ್ಣೋದ್ದಾರ ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು, ಊರ ಭಕ್ತಾಧಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು