News Karnataka Kannada
Wednesday, May 01 2024
ಮಂಗಳೂರು

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಹಿನ್ನೆಲೆ, ಆರೋಪಿ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಅನಂತ್ ಭಟ್ ಬಂಧನ

Local News
Photo Credit :

ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಕೆ ಎಸ್ ಎನ್ ರಾಜೇಶ್ ಭಟ್ ಅವರಿಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಬೊಂದೇಲ್ ನಿವಾಸಿ ಅನಂತ್ ಭಟ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ .

ಇವರು ಪ್ರಕರಣ ಪ್ರಮುಖ ಆರೋಪಿ ರಾಜೇಶ್ ಭಟ್ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಪೋಲಿಸರ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಳ್ಳುವಲ್ಲಿ ಸಹಕರಿಸಿದ್ದಾರೆ. ಪ್ರಕರಣದ ವರದಿಯಾದ ಕೂಡಲೇ ದೂರದ ಸ್ಥಳಕ್ಕೆ ಬಿಟ್ಟು ಬಂದಿದ್ದಾರೆ ನಂತರ ಆರೋಪಿ ರಾಜೇಶ್ ಭಟ್ ರವರ ಕಾರು ಮತ್ತವರು ಬಳಸುತ್ತಿದ್ದ ಮೊಬೈಲ್ ಫೋನನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರಿಗೆ ಸಿಗದಂತೆ ಸಹಕರಿಸುತ್ತಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಂತ್ ಭಟ್ ರವರ ಪಾತ್ರವನ್ನು ತಿಳಿದುಕೊಳ್ಳಲು ಹಾಗೂ ಪ್ರಮುಖ ಆರೋಪಿ ರಾಜೇಶ್ ಭಟ್ ಅವರನ್ನು ಪತ್ತೆ ಹಚ್ಚುವ ಸಲುವಾಗಿ ದಸ್ತಗಿರಿ ಮಾಡಲಾಗಿರುತ್ತದೆ.

ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬುವರನ್ನು ತಪ್ಪಿಸಿಕೊಳ್ಳಲು ರಾಜೇಶ್ ಭಟ್ ಅವರ ಕಾರು ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು