ಮಂಗಳೂರು : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಕೆ ಎಸ್ ಎನ್ ರಾಜೇಶ್ ಭಟ್ ಅವರಿಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ ಬೊಂದೇಲ್ ನಿವಾಸಿ ಅನಂತ್ ಭಟ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ .
ಇವರು ಪ್ರಕರಣ ಪ್ರಮುಖ ಆರೋಪಿ ರಾಜೇಶ್ ಭಟ್ ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಪೋಲಿಸರ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಳ್ಳುವಲ್ಲಿ ಸಹಕರಿಸಿದ್ದಾರೆ. ಪ್ರಕರಣದ ವರದಿಯಾದ ಕೂಡಲೇ ದೂರದ ಸ್ಥಳಕ್ಕೆ ಬಿಟ್ಟು ಬಂದಿದ್ದಾರೆ ನಂತರ ಆರೋಪಿ ರಾಜೇಶ್ ಭಟ್ ರವರ ಕಾರು ಮತ್ತವರು ಬಳಸುತ್ತಿದ್ದ ಮೊಬೈಲ್ ಫೋನನ್ನು ಅಜ್ಞಾತ ಸ್ಥಳದಲ್ಲಿ ಬಚ್ಚಿಟ್ಟು ಪೊಲೀಸರಿಗೆ ಸಿಗದಂತೆ ಸಹಕರಿಸುತ್ತಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನಂತ್ ಭಟ್ ರವರ ಪಾತ್ರವನ್ನು ತಿಳಿದುಕೊಳ್ಳಲು ಹಾಗೂ ಪ್ರಮುಖ ಆರೋಪಿ ರಾಜೇಶ್ ಭಟ್ ಅವರನ್ನು ಪತ್ತೆ ಹಚ್ಚುವ ಸಲುವಾಗಿ ದಸ್ತಗಿರಿ ಮಾಡಲಾಗಿರುತ್ತದೆ.
ಪ್ರಮುಖ ಆರೋಪಿ ರಾಜೇಶ್ ಭಟ್ ಎಂಬುವರನ್ನು ತಪ್ಪಿಸಿಕೊಳ್ಳಲು ರಾಜೇಶ್ ಭಟ್ ಅವರ ಕಾರು ಮತ್ತು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.