News Karnataka Kannada
Tuesday, April 30 2024
ಮಂಗಳೂರು

ಕಾಪು ಬ್ಲಾಕ್ ವ್ಯಾಪ್ತಿಯಲ್ಲಿ ಮೇ 9ರಂದು ಕ್ಷೇತ್ರವಾರು ಸಭೆ

Demand for amendment of certain rules of Gram Swaraj and Panchayati Raj
Photo Credit :

ಕಾಪು: ಕಾಪು ಬ್ಲಾಕ್ (ದಕ್ಷಿಣ) ಕಾಂಗ್ರೆಸ್‌ನ ಜಿಲ್ಲಾ ಪಂಚಾಯತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮ ಪಂಚಾಯತಿ ಮಟ್ಟದಲ್ಲಿ ಮೇ 9ರಂದು ಪಕ್ಷದ ಚುನಾಯಿತರಾದ ಹಾಗೂ ಸ್ಪರ್ಧಿಸಿದ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖ ನಾಯಕರು, ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆಯನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಮ್ಮಿಕೊಂಡಿರುತ್ತಾರೆ.

ಈ ಸಭೆಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ  ಅಶೋಕ್ ಕುಮಾರ್ ಕೊಡವೂರು, ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ  ವಿನಯ್ ಕುಮಾರ್ ಸೊರಕೆ ರವರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕರಾದ ಶ್ರೀಮತಿ ರೋಶನಿ ಒಲಿವರ್‌ರವರು ಹಾಗೂ ಕಾನು ಬ್ಲಾಕ್ (ದಕ್ಷಿಣ) ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣರವರು ಭಾಗವಹಿಸಲಿದ್ದಾರೆ.

ಕಾಪು ಬ್ಲಾಕ್ (ದಕ್ಷಿಣ) ವ್ಯಾಪ್ತಿಯ ಆಯಾ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಎಲ್ಲಾ ಮಾಜಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಸದಸ್ಯರು, ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.

ಕಾರ್ಯಕ್ರಮದ ವಿವರ

ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 10ಕ್ಕೆ ಸ್ಥಳ: ಶ್ರೀ ನಾರಾಯಣಗುರು ಸಭಾಭವನದಲ್ಲಿ, ಉಜ್ವಲ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ  ಮಧ್ಯಾಹ್ನ: 12ಕ್ಕೆ ಸ್ಥಳ: ರಾಜೀವ್ ಗಾಂಧಿ ತರಬೇತಿ ಕೆಂದ್ರದಲ್ಲಿ, ಕುರ್ಕಾಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಅಪರಾಹ್ನ: 3ಕ್ಕೆ ಸ್ಥಳ: ರಾಮ್ ಸೈರ್, ಶಿರ್ವ,  ಕುರ್ಕಾಲು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ  ಸಂಜೆ: 5 ಕ್ಕೆ ಸ್ಥಳ: ಜೇಸಿ ಭವನ, ಪಳ್ಳಿಗುಡ್ಡೆ-ಕಟಪಾಡಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು