ಮಂಗಳೂರು : ಮರವೊಂದು ಕಾರಿನ ಮೇಲೆ ಉರುಳಿಬಿದ್ದ ಪರಿಣಾಮ ಕಾರು ಜಖಂಗೊಂಡ ಘಟನೆ ಮಂಗಳೂರು ನಗರದ ಜ್ಯೋತಿ ಹಂಪನ್ ಕಟ್ಟ ರಸ್ತೆಯ ರೂಪ ಹೋಟೆಲ್ ಬಳಿ ಸಂಜೆ ಸಂಭವಿಸಿದೆ .ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪಾಂಡೇಶ್ವರದ ಅಗ್ನಿಶಾಮಕ ದಳ ಮತ್ತು ಸಂಚಾರಿ ಪೊಲೀಸರು ವಾಹನ ಸಂಚರಿಸಲು ಬದಲಿ ವ್ಯವಸ್ಥೆ ಮಾಡಿ ಮರವನ್ನು ತೆರವು ಮಾಡುವ ಕಾರ್ಯ ಮಾಡಿದ್ದಾರೆ ಹಠಾತ್ ಮರ ಬಿದ್ದ ಪರಿಣಾಮ ಸುಮಾರು 1ಗಂಟೆಗಳ ಕಾಲ ಸಂಚಾರದಲ್ಲಿ ವ್ಯತ್ಯಯವಾಗಿತ್ತು.