News Karnataka Kannada
Monday, April 29 2024
ಮಂಗಳೂರು

‘ಕಾರ್ಯಾಂಗ ಸರಿದಾರಿಯಲ್ಲಿ ನಡೆಯಲು ಮಾಧ್ಯಮ ರಂಗ ಕಾರಣ’: ಡಾ. ಕುಮಾರ್

Untitled 1
Photo Credit :

ಮಂಗಳೂರು: ಪತ್ರಿಕಾರಂಗವು ಸಾಮಾಜಿಕ ಪರಿವರ್ತನೆಯ ಅಸ್ತ್ರವಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಜವಾಬ್ದಾರಿ ಮಹತ್ತರವಾದುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಪ್ರಶಸ್ತಿ ಪಡೆದ, ಡಾಕ್ಟರೇಟ್ ಪದವಿ ಗಳಿಸಿದ, ವರ್ಗಾವಣೆಗೊಂಡ, ನಿವೃತ್ತಿ ಹೊಂದಿದ ಪತ್ರಕರ್ತರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳ ಬಗ್ಗೆ ನನಗೆ ಪ್ರೀತಿ, ಗೌರವ ಇದೆ. ಏಕೆಂದರೆ, ಪತ್ರಿಕಾ ಪ್ರತಿನಿಧಿಗಳು ಸಾಮಾಜಿಕ ಕಳಕಳಿಯಿಂದ ಪ್ರತಿ ಬಾರಿ ನಮ್ಮಿಂದ ಮಾಹಿತಿ ಪಡೆದು ಸುದ್ದಿ ಪ್ರಕಟಿಸುತ್ತಾರೆ. ವಿಚಾರ ಮಂಥನ, ಕಾರ್ಯಾಂಗ ಸರಿದಾರಿಯಲ್ಲಿ ನಡೆಯಲು ಮಾಧ್ಯಮ ರಂಗ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಮೌಲ್ಯ ಇರುವ ಪತ್ರಕರ್ತರಿದ್ದಾರೆ. ಪತ್ರಕರ್ತರ ಸಂಘದಿಂದ ಸಾಧಕ ಪತ್ರಕರ್ತರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ ಎಂದರು.

ರಾಜ್ಯ ಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪಡೆದ ಹಿರಿಯ ಪತ್ರಕರ್ತ ಗುರುವಪ್ಪ ಎನ್.ಟಿ. ಬಾಳೇಪುಣಿ, ಕಾಸರಗೋಡು ಪತ್ರಕರ್ತರ ಸಂಘದಿಂದ ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ದತ್ತಿಪ್ರಶಸ್ತಿ ಪಡೆದ ಮುಹಮ್ಮದ್ ಆರೀಫ್ ಪಡುಬಿದ್ರಿ, ಡಾಕ್ಟರೇಟ್ ಪದವಿ ಗಳಿಸಿದ ಸತೀಶ್ ಕೊಣಾಜೆ, ಚಂದ್ರಹಾಸ ಚಾರ್ಮಾಡಿ, ನಿವೃತ್ತಿ ಹೊಂದಿದ ಹಿಲರಿ ಕ್ರಾಸ್ತಾ, ಸ್ವಯಂ ನಿವೃತ್ತಿ ಪಡೆದ ಸುಭಾಶ್ ಸಿದ್ದಮೂಲೆ, ಸುಷ್ಮಿತಾ ಕೋಟ್ಯಾನ್, ವರ್ಗಾವಣೆಗೊಂಡ ಮಹೇಶ್ ಕನ್ನೇಶ್ವರ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ವಾರ್ತಾಧಿಕಾರಿ ರವಿರಾಜ್ ಅತಿಥಿಯಾಗಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಸನ್ಮಾನಿತರ ವಿವರ ನೀಡಿದರು. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು