ಮಂಗಳೂರು : ನಗರದಲ್ಲಿ ಕಾಶ್ಮೀರದ ಪಂಡಿತರ ಹತ್ಯಾಕಾಂಡದ ಕುರಿತು ಕಾಶ್ಮೀರ ಫೈಲ್ ಚಿತ್ರವನ್ನು ನೋಡಿದ ಸಂತರು ದಿಗ್ಭ್ರಮೆಗೊಂಡಿದ್ದಾರೆ . ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ ಚಿತ್ರವನ್ನು ನೋಡಿದ ನನಗೆ ರಕ್ತ ಕುದಿಯುತ್ತಿದೆ ಹಿಂದಿನ ಸರಕಾರದ ದೌರ್ಬಲ್ಯ ನಿರ್ಲಕ್ಷ್ಯದಿಂದಾಗಿ ಇಷ್ಟೆಲ್ಲ ನಡೆದಿದೆ ಭಯೋತ್ಪಾದಕರ ಕ್ರೌರ್ಯ ಇಲ್ಲಿ ಅನಾವರಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕರ ಕರಾಳ ಕ್ರೌರ್ಯವನ್ನು ನೋಡಿ ಅಲ್ಲಿನ ದೃಶ್ಯಗಳನ್ನು ನೋಡಿ ಸಂತನಾದ ನನಗೆ ಕಣ್ಣೀರು ಆಕ್ರೋಶ ಬರಬೇಕಾದರೆ ಜನಸಾಮಾನ್ಯರ ಏನಾಗಬಹುದು. ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ನಡೆದ ಕ್ರೌರ್ಯವನ್ನು ಊಹಿಸಲು ಸಾಧ್ಯವಿಲ್ಲ ಇದು ಇಲ್ಲಿಗೆ ಕೊನೆಗೊಳ್ಳಬೇಕು ಮುಂದೆ ಯಾವತ್ತೂ ಕೇರಳ ಫೈಲ್ಸ್ ಕೊಡಗು ಫೈಲ್ಸ್ ನಂತಹ ಸಿನಿಮಾಗಳು ಮತ್ತೆ ಬರುವಂತೆ ಆಗಬಾರದು ಇದಕ್ಕಾಗಿ ಹಿಂದುಗಳು ಎಚ್ಚೆತ್ತುಕೊಳ್ಳಬೇಕು. ಹಿಂದುಗಳು ಅಲ್ಪಸಂಖ್ಯಾತರಾದರೆ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ವಜ್ರಾದೇಹಿ ಸ್ವಾಮೀಜಿ ಹೇಳಿದರು.