News Karnataka Kannada
Monday, April 29 2024
ಮಂಗಳೂರು

ಕಾಸರಗೋಡಿನಿಂದ ಉಳ್ಳಾಲಕ್ಕೆ ಗೋ ಮಾಂಸ ಸಾಗಾಟ: ನಾಲ್ವರ ಬಂಧನ

Industrialist's suicide case: Main accused arrested
Photo Credit :

ಮಂಗಳೂರು: ಕಾಸರಗೋಡಿನಿಂದ ಉಳ್ಳಾಲಕ್ಕೆ ಒಂದು ಕ್ವಿಂಟಾಲ್ 60ಕೆಜಿ ಗೋ ಮಾಂಸವನ್ನು ಕಾರಿನಲ್ಲಿ ತುಂಬಿಸಿ ಸಾಗಾಟ ಮಾಡುತ್ತಿದ್ದ ಪ್ರಕರಣ ಪತ್ತೆ ಹಚ್ವಿದ ಪೊಲೀಸರು ಈ ಸಂಬಂಧ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರು ಪೆರ್ಮನ್ನೂರು ಚೆಂಬುಗುಡ್ಡೆ ನಿವಾಸಿ ಹುಸೇನ್ (24), ಉಳ್ಳಾಲ ರಿಜ್ವಾ ಮಂಜಿಲ್ ಕೋಡಿಯ ಮಹಮ್ಮದ್ ಮುಜಾಂಬಿಲ್ (25), ಉಳ್ಳಾಲದ ಫಾತಿಮಾ ಮಂಜಿಲ್ ಕೋಡಿಯ ಮಹಮ್ಮದ್ ಅಮೀನ್ (21) ಮತ್ತು ಉಳ್ಳಾಲ ಅಲ್ ಅದಿ ಹೌಸ್ ಕೋಡಿಯ ಸೊಹೈಬ್ ಅಕ್ತರ್ (22) ಬಂಧಿತರು.

ಆರೋಪಿಗಳಿಂದ ಗೋ ಮಾಂಸ, ಕಾರು ಸೇರಿದಂತೆ ರೂ.3.10 ಲಕ್ಷ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪೊಲೀಸರಿಗೆ ದೊರೆತ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆದಿತ್ತು. ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡಲು ಆರೋಪಿಗಳು ಮಾಂಸ ಸಾಗಾಟ ಮಾಡುತ್ತಿದ್ದರು. ಕಾರಿನಲ್ಲಿ ದನದ ಮಾಂಸ, ದನದ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿವೆ. ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿಎಸ್ಐ ರಾಜೇಂದ್ರ ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್ ಮಣಿ ಎಂ. ಎನ್ ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು