News Karnataka Kannada
Sunday, May 12 2024
ಮಂಗಳೂರು

ಕಿಂಡಿ ಅಣೆಕಟ್ಟು ಕಾಮಗಾರಿ ವೀಕ್ಷಣೆ ನಡೆಸಿದ ಸಣ್ಣ ನೀರಾವರಿ ಇಲಾಖೆ ಸಚಿವ ಜಿ.ಸಿ.ಮಾಧುಸ್ವಾಮಿ

Madhu Swami
Photo Credit :

ಬೆಳ್ತಂಗಡಿ: ಪಶ್ಚಿಮ ವಾಹಿನಿ ಯೋಜನೆಯಡಿ ಬೆಳ್ತಂಗಡಿ ತಾಲೂಕಿಗೆ ಮಂಜೂರಾದ 23 ಕ್ಕೂ ಅಧಿಕ ಕಿಂಡಿ ಅಣೆಕಟ್ಟುಗಳ ಶೇ.90 ಕಾಮಗಾರಿ ಪೂರ್ಣಗೊಂಡಿದೆ. ಮಾರ್ಚ್ ಒಳಗಾಗಿ ಎಲ್ಲ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಣ್ಣ ನೀರಾವರಿ, ಕಾನೂನು ಹಾಗೂ ಸಂಸದೀಯ ವ್ಯವಹಾರ ಮಂಡಳಿ ಸಚಿವ ಜೆ.ಸಿ.ಮಾಧು ಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಶ್ಚಿಮವಾಹಿನಿ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಮುಳಿಕ್ಕಾರ್ ಬಂದಾರಿನ ಪೆರಡಾಲ, ಪಜಿರಡ್ಕ, ಮುಂಡಾಜೆಯ ಕಡಂಬಳ್ಳಿ ಮೊದಲಾದ ಕಡೆ ನಿರ್ಮಾಣಗೊಳುತ್ತಿರುವ ಕಿಂಡಿ ಅಣೆಕಟ್ಟುಗಳ ಕಾಮಗಾರಿಯನ್ನು ಜ.29 ರಂದು ವೀಕ್ಷಣೆ ನಡೆಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಸರಕಾರದ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸಣ್ಣ ನೀರಾವರಿ ಇಲಾಖೆ ಮೈಸೂರು ವಿಭಾಗದ ಅಧೀಕ್ಷಕ ಎಂಜಿನಿಯರ್ ರಾಜಶೇಖರ್ ಯಡಹಳ್ಳಿ, ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷೆ ಜಯಾ ಮೋನಪ್ಪ ಗೌಡ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್, ತಾ.ಪಂ. ಮಾಜಿ ಸದಸ್ಯೆ ಧನಲಕ್ಷ್ಮೀ ಜನಾರ್ದನ್, ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಗೋಕುಲ್ ದಾಸ್, ಸಹಾಯಕ ಕಾರ್ಯಪಾಲಕ ಅಭಿಯಂತರ ವಿಷ್ಣು ಕಾಮತ್, ಸಹಾಯಕ ಅಭಿಯಂತರ ಶಿವಪ್ರಸನ್ನ, ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು