ಮಂಗಳೂರು

ಕಿದು ಜೀನ್ ಬ್ಯಾಂಕ್ ಕೇಂದ್ರ ಸ್ಥಳಾಂತರ ಇಲ್ಲ: ಕೇಂದ್ರ ಕೃಷಿ ಸಚಿವ ಸ್ಪಷ್ಠನೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಕಿದು ನಲ್ಲಿರುವ ICAR-CPCRI ಅಂತರಾಷ್ಟ್ರೀಯ ತೆಂಗು ಜೀನ್ ಬ್ಯಾಂಕ್ (ಸೌತ್ ಏಷ್ಯಾ) ಸಂಶೋಧನಾ ಕೇಂದ್ರವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಗಣನೆಯಲ್ಲಿ ಇಲ್ಲ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ರವರು ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು ಇವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಕಿದು ಸಂಶೋಧನಾ ಕೇಂದ್ರದಲ್ಲಿ 2 ಮಂದಿ ವಿಜ್ಞಾನಿಗಳು, 5 ಮಂದಿ ತಾಂತ್ರಿಕ ಸಿಬ್ಬಂದಿ, ಒಬ್ಬರು ಸಹಾಯಕ ಆಡಳಿತ ಅಧಿಕಾರಿ ಹಾಗೂ ಒಬ್ಬರು ಆಡಳಿತ ಸಿಬ್ಬಂದಿ ಹಾಗೂ 16 ನುರಿತ ಸಹಾಯಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದು, ಕಿದು ಸಂಶೋಧನ ಕೇಂದ್ರದ ಲೀಸ್ ನವೀಕರಣಕ್ಕೆ ವಿಧಿಸಲಾಗಿರುವ ನೆಟ್ ಪ್ರೆಸೆಂಟ್ ವ್ಯಾಲ್ಯೂ (ಎನ್ ಪಿ ವಿ) ಪಾವತಿಯ ಬಗ್ಗೆ ರಿಯಾಯಿತಿ ನೀಡುವ ಪ್ರಸ್ತಾವನೆ ಸರ್ವೋಚ್ಚ ನ್ಯಾಯಾಲಯದ ಪರಿಗಣನೆಯಲ್ಲಿದ್ದು, ಸರ್ವೋಚ್ಚ ನ್ಯಾಯಾಲಯ ಅದೇಶದ ಪ್ರಕಾರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಶ್ರೀ ನಳಿನ್ ಕುಮಾರ್ ಕಟೀಲು ಇವರು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ನರೇಂದ್ರ ಸಿಂಗ್ ತೋಮರ್ ರವರಿಗೆ ಈ ಹಿಂದೆ ಪತ್ರ ಮುಖೇನ ಕಿದು ನಲ್ಲಿರುವ ಅತ್ಯಂತ ವಿಶಿಷ್ಠವಾಗಿರುವ ಕಿದು ಅಂತರ ರಾಷ್ಟ್ರೀಯ ತೆಂಗು ಜೀನ್ ಬ್ಯಾಂಕ್ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸದೆ ಸದರಿ ಕೇಂದ್ರವನ್ನು ಕಿದುವಿನಲ್ಲೆ ಮುಂದುವರೆಸುವ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ವಿನಂತಿಸಿದ್ದ ಹಿನ್ನಲೆಯಲ್ಲಿ ಸಚಿವರು ಈ ಪತ್ರವನ್ನು ಬರೆದಿದ್ದಾರೆ.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

4 seconds ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

8 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

25 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

26 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

37 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

38 mins ago