ಮಂಗಳೂರು : ಅಂತರ್ರಾಷ್ಟ್ರೀಯ ಸೇವಾ ಸಂಸ್ಥೆಯಾದ ಜೂನಿಯರ್ ಚೇಂಬರ್ ಇಂಟರ್ ನ್ಯಾಷನಲ್ ( ಜೆಸಿಐ ) ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಕಮಲ ಪತ್ರ “ ಪ್ರಶಸ್ತಿಯನ್ನು ಪ್ರಸಿದ್ದ ಜಾದೂಗಾರ ಕುದ್ರೋಳಿ ಗಣೇಶ್ ಇವರಿಗೆ ಪ್ರದಾನ ಮಾಡಲಾಯಿತು. ಭಾರತದ ಜಾದೂ ಕ್ಷೇತ್ರಕ್ಕೆ ಅಂತರ್ರಾಷ್ಟ್ರೀಯ ಮನ್ನಣೆ ನೀಡುವಲ್ಲಿ ಶ್ರಮಿಸಿದ ಸಾಧನೆಯನ್ನು ಗಮನಿಸಿ ಜೆಸಿಐ ಲಾಲ್ ಭಾಗ ಘಟಕವು ಕುದ್ರೋಳಿ ಗಣೇಶ್ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತ್ತು.
ಮಂಗಳೂರಿನ ಕದ್ರಿಯ ಲಯನ್ಸ್ ಅಶೋಕಾ ಸೇವಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಲಯ 15 ರ ಅಧ್ಯಕ್ಷರಾದ ಜೆಸಿಐ ಸೆನೆಟರ್ ಸೌಜನ್ಯ ಹೆಗ್ಡೆ ಇವರು ಪ್ರಶಸ್ತಿ ಪ್ರದಾನ ಮಾಡಿದರು. ಜಾದೂ ಕಲೆಯನ್ನು ಪ್ರೇಕ್ಷಕರ ಮನಸ್ಸಿಗೆ ಮುಟ್ಟಿಸುವಲ್ಲಿ ಕಳೆದ 30 ವರ್ಷಗಳಿಂದ ಕುದ್ರೋಳಿ ಗಣೇಶ್ ರವರು ಮಾಡುತ್ತಿರುವ ಅವಿರತ ಪ್ರಯತ್ನ ಅಭಿನಂದನಾರ್ಹ ಎಂದು ಅವರು ಹೇಳಿದರು.
ವಲಯ ಉಪಾಧ್ಯಕ್ಷರಾದ ದರ್ಶಿತ್ ಆರ್ ಶೆಟ್ಟಿ , ಜೆಸಿಐ ಲಾಲ್ ಬಾಗ್ ಘಟಕದ ಅಧ್ಯಕ್ಷರಾದ ಪ್ರಶಾಂತ್ ಬಿ ಶೆಟ್ಟಿ, ಘಟಕದ ಸ್ಥಾಪಕ ಅಧ್ಯಕ್ಷರಾದ ಪೀಟರ್ ಆಂಟನಿ ಪಿಂಟೋ, ನಿಕಟಪೂರ್ವ ಅಧ್ಯಕ್ಷರಾದ ಪ್ರಿನ್ಸ ಪಿಂಟೋ, ಮುಂದಿನ ಸಾಲಿನ ಅಧ್ಯಕ್ಷರಾದ ಪ್ರವೀಣ್ ಉಡುಪ ಮುಂತಾದವರು ಉಪಸ್ಥಿತರಿದ್ದರು.
ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂಸ್ಥೆಗಳ…
ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್ಫ್ಲಿಕ್ಸ್ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ