ಬೆಳ್ತಂಗಡಿ : ಕುವೆಟ್ಟು ಸರಕಾರಿ ಶಾಲಾ ಅಮೃತ ಮಹೋತ್ಸವ ವರ್ಷದಲ್ಲಿ ಮುನ್ನಡೆಯುತ್ತಿದ್ದು, ಶಾಲಾ ಅಭಿವೃದ್ಧಿ ಮತ್ತು ವಿವಿಧ ವಿಚಾರಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ನಿಯೋಗ ಭೇಟಿ ಮಾಡಿ ಚರ್ಚಿಸಿತು.
ಈ ಸಂದರ್ಭದಲ್ಲಿ ಶಾಲಾ ಅಮೃತ ಮಹೋತ್ಸವ ಆಚರಣೆಯ ಪ್ರಯುಕ್ತ ಬೇಡಿಕೆಗಳ ಮನವಿಯನ್ನು ಅವರಿಗೆ ಸಲ್ಲಿಸಲಾಯಿತು.
ಎಸ್. ಡಿ .ಎಮ್.ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಸದಸ್ಯರಾದ ಸಮೀರ್,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಪೆರಂಗೋಡಿ, ಅಶ್ವಿನಿ ಮತ್ತು ಧನಲಕ್ಷ್ಮೀ, ಶಿಕ್ಷಕ ಸುರೇಶ್ ಶೆಟ್ಟಿ ಇವರು ಉಪಸ್ಥಿತರಿದ್ದರು.