ಕೊಂಕಣಿಗರು ಕರ್ನಾಟಕದ ಕರಾವಳಿ ಯುದ್ದಕ್ಕೂ ಪಸರಿಸಿ ಕನ್ನಡ ನೆಲದ ಸಾಂಸ್ಕೃತಿಕ ಒಲವುಗಳಿಗೆ ತೆರೆದುಕೊಂಡು ಕನ್ನಡಿಗರೇ ಆಗಿ, ಕನ್ನಡ ಸಂಸ್ಕೃತಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಎಂದು ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಶ್ರೀ ವೆಂಕಟೇಶ ನಾಯಕ್ ಹೇಳಿದರು.
ಅವರು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ಕೆನರಾ ಪದವಿಪೂರ್ವ ಕಾಲೇಜಿನ ಕನ್ನಡ ಬಳಗ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸದಸ್ಯರಾದ ಅರುಣ್ ಜಿ ಸೇಟ್ ವಹಿಸಿದ್ದರು. ಅತಿಥಿಯಾಗಿ ಕೆನರಾ ಪದವಿಪೂರ್ವಕಾಲೇಜಿನ ಸಂಚಾಲಕರಾದ ಶ್ರೀ ಬಸ್ಸಿ ಪುರುಷೋತ್ತಮ ಶೆಣೈ ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಕೆನರಾ ಪದವಿಪೂರ್ವ ಕಾಲೇಜಿನ ಡೀನ್ ಶ್ರೀ ಗೋಪಾಲಕೃಷ್ಣ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಲತಾ ಮಹೇಶ್ವರಿ ಹಾಗೂ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯ ಸಂಚಾಲಕರಾದ ಕೆನ್ಯೂಟ್ ಜೀವನ್ ಪಿಂಟೋ ಪಾಲ್ಗೊಂಡಿದ್ದರು
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಘು ಇಡ್ಕಿದು, ಡಾ. ಅರುಣ್ ಉಳ್ಳಾಲ, ಸುಬ್ರಹ್ಮಣ್ಯ ಎಂ ಜಿ ಸಹಕರಿಸಿದರು. ವಿದ್ಯಾರ್ಥಿಗಳಾದ ಗೌರಿದತ್ ಪೈ ಇದು ಅನನ್ಯ ಪ್ರಾರ್ಥಿಸಿದರು. ನವ್ಯ ಕಾರ್ಯಕ್ರಮ ನಿರೂಪಿಸಿದರು. ಗಗನ್ ಶೆಟ್ಟಿ ವಂದನಾರ್ಪಣೆ ಗೈದರು.