ಮಂಗಳೂರು: ಹತ್ತನೇ ತರಗತಿ ಪಠ್ಯ ಪುಸ್ತಕದಿಂದ ನಾರಾಯಣಗುರುಗಳ ವಿಷಯ ಕೈಬಿಟ್ಟು ಬಿಜೆಪಿ ಸರಕಾರ ಅವರಿಗೆ ಅವಮಾನ ಮಾಡುತ್ತಿದೆ ಇದರ ವಿರುದ್ಧ ಚಳವಳಿ ನಡೆಸಲಾಗುವುದೆಂದು ಮಾಜಿ ಶಾಸಕ ಜೆ ಆರ್ ಲೋಬೋ ಎಚ್ಚರಿಕೆ ನೀಡಿದರು .
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಯಿತು ಮಂಗಳೂರು ವಿಮಾನ ನಿಲ್ದಾಣ ರೈಲು ನಿಲ್ದಾಣಕ್ಕೆ ಅವರ ಹೆಸರಿಡಲು ಒತ್ತಾಯಿಸಿದರೂ ಸರಕಾರ ಸ್ಪಂದಿಸಿಲ್ಲ ದಕ್ಷಿಣ ಕನ್ನಡ ಬ್ಯಾಂಕ್ ಗಳ ಹೆಸರು ಕೂಡ ಇಲ್ಲದಂತೆ ಸರಕಾರ ಮಾಡಿದೆ ಹೆಜ್ಜೆಹೆಜ್ಜೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಅವಮಾನ ಮಾಡುತ್ತಿದೆ ಎಂದರು.
ಬಸವಣ್ಣ , ಪೆರಿಯಾರ್ ಅವರ ಹೆಸರನ್ನು ಕೈಬಿಟ್ಟಿದೆ ವಿದ್ಯಾರ್ಥಿಗಳಿಗೆ ಎಲ್ಲಾ ಧರ್ಮದ ಸಾಧಕರ ವಿಚಾರವು ತಿಳಿಯುವಂತಾಗಬೇಕು ಎಂದು ಅವರು ಹೇಳಿದರು.