ಮಂಗಳೂರು : ಮಾಜಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗೆ ಐವನ್ ಡಿಸೋಜಾ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದಲ್ಲಿ, ಐವನ್ ಡಿಸೋಜ ಕೇಸರಿ ಶಾಲು ಹಾಕಿದವರು ಟೆರರಿಸ್ಟ ಹೇಳಿದ್ದಾರೆ ಎನ್ನಲಾಗಿದ್ದು ಈ ಬಗ್ಗೆ ಭಾರೀ ಆಕ್ರೋಶ ಕೇಳಿ ಬಂದಿದೆ .
ಇದಕ್ಕೆ ಪ್ರತೀಕಾರ ತೀರಿಸಲು ಐವನ್ ಡಿಸೋಜ ಅವರ ಮನೆಗೆ ಮುತ್ತಿಗೆ ಹಾಕಿ ಕೇಸರಿ ಬಣ್ಣ ಬಳಿಯಲು ಬಜರಂಗದಳದ ಕಾರ್ಯಕರ್ತರು ಮುಂದಾಗಿದ್ದರು. ಆದರೆ ಮನೆಯ ಆವರಣಕ್ಕೆ ನುಗ್ಗಲು ಯತ್ನಿಸಿದ ಬಜರಂಗದಳದ ಕಾರ್ಯಕರ್ತರು ಪೊಲೀಸರು ತಡೆದಿದ್ದಾರೆ .ಹಲವು ಕಾರ್ಯಕರ್ತರು ರಸ್ತೆಯಲ್ಲಿ ತಡೆದು ವಶಕ್ಕೆ ಪಡೆದ ಪೊಲೀಸರು ಅಲ್ಲಿಂದ ಪಾಂಡೇಶ್ವರ ಠಾಣೆಗೆ ಒಯ್ದಿದ್ದಾರೆ. ಪ್ರಕರಣ ಸಂಬಂಧ ಐವನ್ ಡಿಸೋಜಾ ಬಹಿರಂಗವಾಗಿ ಕ್ಷಮೆ ಕೇಳಬೇಕೆಂದು ಬಜರಂಗದಳ ಕಾರ್ಯಕರ್ತರು ಒತ್ತಾಯಿಸಿದ್ದಾರೆ.