News Karnataka Kannada
Sunday, May 05 2024
ಮಂಗಳೂರು

ಕೊರಗ ಮನೆಗಳಿಗೆ ಶಾಸಕರ ಭೇಟಿ

New Project 2021 09 28t132516.562
Photo Credit :
ಬೆಳ್ತಂಗಡಿ: ಉಜಿರೆ ಗ್ರಾಮದ ಉಚ್ಚಿಲ ಸಮೀಪದ ಬಡೆಕೊಟ್ಟು ಪ್ರದೇಶದ ಮೂಲ ನಿವಾಸಿ ಕೊರಗ ಕುಟುಂಬಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ೧೧ ಮನೆಗಳ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ರವಿವಾರ ಪರಿಶೀಲಿಸಿದರು.
ಶಾಸಕ ಹರೀಶ್ ಪೂಂಜ ಕುಟುಂಬದ ಸದಸ್ಯರೊಂದಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕಾಮಗಾರಿ ವಿವರ ಪಡೆದರು. ೩.೫೦ ಲಕ್ಷ ರೂ. ಘಟಕ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಮನೆಗಳು ೪೦೦ಕ್ಕಿಂತ ಅಧಿಕ ಚದರ ಅಡಿಯಲ್ಲಿದೆ. ಹಾಲ್, ಬೆಡ್ ರೂಂ, ಅಡುಗೆಕೋಣೆ, ಡೈನಿಂಗ್ ಹಾಲ್ ಒಳಗೊಂಡಿವೆ. ಪ್ರತ್ಯೇಕ ಹೊರಾಂಗಣ ವ್ಯವಸ್ಥೆಯೂ ಇದೆ. ಶಾಸಕನ ನೆಲೆಯಲ್ಲಿ ಪ್ರತಿ ಮನೆಗೆ ತಲಾ ಒಂದು ಲಕ್ಷ ರೂ. ಹೆಚ್ಚುವರಿಯಾಗಿ ವಯಕ್ತಿಕ ನೆಲೆಯಲ್ಲಿ ಒದಗಿಸಿದ್ದೇನೆ ಎಂದು ತಿಳಿಸಿದರು.
ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವ ಬಗ್ಗೆ ಪ್ರತಿ ಮನೆಗಳಿಗೆ ಸೋಲಾರ್ ವ್ಯವಸ್ಥೆ, ಕಾಂಪೌಡ್ ರಚಿಸಿ ಕೊಡಲಾಗುವುದು. ಕಾಲನಿಯು ಮಾದರಿಯಾಗಿರುವಲ್ಲಿ ಮನೆಮಂದಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ತಿಳಿಸಿದರು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಅಗತ್ಯ ನೆರವು ಒದಗಿಸುವ ಸಲುವಾಗಿ ಚರ್ಚಿಸಿದ್ದೇನೆ ಎಂದು ತಿಳಿಸಿದರು.
ಉಜಿರೆ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಶೆಟ್ಟಿ, ಉಪಾ‌ಧ್ಯಕ್ಷ ರವಿ ಬರಮೇಲು, ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ಚೆನ್ನಕೇಶವ, ಸದಸ್ಯರಾದ ಪ್ರೇಮ್ ವೇಗಸ್, ನಾಗವೇಣಿ, ಜಾನೆಟ್ ಪಿಂಟೋ, ಅಭಿವೃದ್ಧಿ ಅಧಿಕಾರಿ ಪ್ರಕಾಶ ಶೆಟ್ಟಿ, ನಾವೂರು ಗ್ರಾ.ಪಂ. ಅಧ್ಯಕ್ಷ ಗಣೇಶ್ ಗೌಡ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹೇಮಚಂದ್ರ, ಐಟಿಡಿಪಿ ತಾಲೂಕು ಅಧಿಕಾರಿ ಹೇಮಲತಾ ಮತ್ತಿತರರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು