Categories: ಮಂಗಳೂರು

ಗುಂಡೇಟಿಗೆ ಎಮ್ಮೆ ಬಲಿ

ಬೆಳ್ತಂಗಡಿ :ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ.

ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು ಕಂಡುಬಂದಿದ್ದು ಬೇಟೆಗಾರರ ಗುಂಡೇಟಿಗೆ ಬಲಿಯಾಗಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಜತೆ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶುವೈದ್ಯಕೀಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Raksha Deshpande

Recent Posts

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

15 mins ago

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…

32 mins ago

ಮಲೆಮಹದೇಶ್ವರನ ಹುಂಡಿಯಲ್ಲಿ 3.05 ಕೋಟಿ ಕಾಣಿಕೆ ಸಂಗ್ರಹ

ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…

1 hour ago

ಪ್ರಜ್ವಲ್ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು: ಸಲೀಂ ಅಹ್ಮದ್

ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…

2 hours ago

ಸಿಎನ್ ಜಿ ಇಂಧನ ನಿರಂತರ ಪೂರೈಕೆಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…

2 hours ago

ಲಕ್ಷ್ಮೀ ಹೆಬ್ಬಾಳಕರ್ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದ ನೇಹಾ ಹಿರೇಮಠ ತಂದೆ-ತಾಯಿ

ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…

3 hours ago