News Karnataka Kannada
Sunday, May 05 2024
ಮಂಗಳೂರು

ಗುತ್ತಿಗೆದಾರರು ಶೀಘ್ರದಲ್ಲಿ ಕಾಮಗಾರಿ ಮುಗಿಸುವ ವಿಶ್ವಾಸವಿದೆ:ರಾಜೇಶ್ ನಾಯ್ಕ್ ಉಳಿಪ್ಪಾಡಿ

Bantwal
Photo Credit : News Kannada
ಬಂಟ್ವಾಳ: ಲೋಕೋಪಯೋಗಿ ಇಲಾಖೆಯ  ಅಧೀನದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ಎರ್ಮೆಮಜಲಿನಿಂದ ಒಕ್ಕೆತ್ತೂರುವರೆಗಿನ ರಸ್ತೆಯು 8.65 ಕೋ.ರೂ. ಅನುದಾನದಲ್ಲಿ ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳ್ಳಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಗುತ್ತಿಗೆದಾರರು ಶೀಘ್ರದಲ್ಲಿ ಕಾಮಗಾರಿ ಮುಗಿಸುವ ವಿಶ್ವಾಸವಿದ್ದು, ಈ ಭಾಗದ ನಾಗರಿಕರಿಗೂ ಅನುಕೂಲವಾಗಲಿದೆ ಎಂದರು.
ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಎಇಇ ಷಣ್ಮುಗಂ, ಸಹಾಯಕ ಎಂಜಿನಿಯರ್ ಪ್ರೀತಂ, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಮರಾಜ್ ಚೌಟ, ಅನಂತಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಸನತ್‌ಕುಮಾರ್ ರೈ, ಪ್ರಮುಖರಾದ ಸಂದೀಪ್ ಶೆಟ್ಟಿ ಅರೆಬೆಟ್ಟು, ಅಭಿಷೇಕ್ ರೈ ವಿಟ್ಲಪಡ್ನೂರು, ಮೀನಾಕ್ಷಿ, ಜಯಂತಿ, ಚಂದ್ರಶೇಖರ್ ಬಾಯಿಲ, ಜಯಪ್ರಸಾದ್, ಜಯರಾಮ್ ಬೊಳಂತೂರು, ದೇವಿಪ್ರಸಾದ್, ಅರವಿಂದ ರೈ, ಪದ್ಮನಾಭ, ವೀರಪ್ಪ ಮೂಲ್ಯ, ಜಾರಪ್ಪ ಮೂಲ್ಯ, ಸದಾಶಿವ, ರಮೇಶ್ ಮೈರ, ಈಶ್ವರ ಭಟ್ ಉಪಸ್ಥಿತರಿದ್ದರು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು