Categories: ಮಂಗಳೂರು

ಗುತ್ತಿಗೆದಾರರು ಶೀಘ್ರದಲ್ಲಿ ಕಾಮಗಾರಿ ಮುಗಿಸುವ ವಿಶ್ವಾಸವಿದೆ:ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಲೋಕೋಪಯೋಗಿ ಇಲಾಖೆಯ  ಅಧೀನದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ಎರ್ಮೆಮಜಲಿನಿಂದ ಒಕ್ಕೆತ್ತೂರುವರೆಗಿನ ರಸ್ತೆಯು 8.65 ಕೋ.ರೂ. ಅನುದಾನದಲ್ಲಿ ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳ್ಳಲಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ವೀರಕಂಭ ಗ್ರಾಮದ ಎರ್ಮೆಮಜಲಿನಲ್ಲಿ ಹೆದ್ದಾರಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಗುತ್ತಿಗೆದಾರರು ಶೀಘ್ರದಲ್ಲಿ ಕಾಮಗಾರಿ ಮುಗಿಸುವ ವಿಶ್ವಾಸವಿದ್ದು, ಈ ಭಾಗದ ನಾಗರಿಕರಿಗೂ ಅನುಕೂಲವಾಗಲಿದೆ ಎಂದರು.
ಬಂಟ್ವಾಳ ಲೋಕೋಪಯೋಗಿ ಇಲಾಖೆಯ ಎಇಇ ಷಣ್ಮುಗಂ, ಸಹಾಯಕ ಎಂಜಿನಿಯರ್ ಪ್ರೀತಂ, ತಾ.ಪಂ.ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಮಾವೆ, ಬಂಟ್ವಾಳ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೀಮಾ ಮಾಧವ, ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್, ನೇರಳಕಟ್ಟೆ ಸಿಎ ಬ್ಯಾಂಕ್ ಅಧ್ಯಕ್ಷ ಪುಷ್ಮರಾಜ್ ಚೌಟ, ಅನಂತಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಸನತ್‌ಕುಮಾರ್ ರೈ, ಪ್ರಮುಖರಾದ ಸಂದೀಪ್ ಶೆಟ್ಟಿ ಅರೆಬೆಟ್ಟು, ಅಭಿಷೇಕ್ ರೈ ವಿಟ್ಲಪಡ್ನೂರು, ಮೀನಾಕ್ಷಿ, ಜಯಂತಿ, ಚಂದ್ರಶೇಖರ್ ಬಾಯಿಲ, ಜಯಪ್ರಸಾದ್, ಜಯರಾಮ್ ಬೊಳಂತೂರು, ದೇವಿಪ್ರಸಾದ್, ಅರವಿಂದ ರೈ, ಪದ್ಮನಾಭ, ವೀರಪ್ಪ ಮೂಲ್ಯ, ಜಾರಪ್ಪ ಮೂಲ್ಯ, ಸದಾಶಿವ, ರಮೇಶ್ ಮೈರ, ಈಶ್ವರ ಭಟ್ ಉಪಸ್ಥಿತರಿದ್ದರು
Swathi MG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

2 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

2 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

3 hours ago