News Karnataka Kannada
Tuesday, April 30 2024
ಮಂಗಳೂರು

ಗುರುಪುರ ಬ್ಲಾಕ್ ಜಿಲ್ಲಾ ಪಂಚಾಯತಿ ವ್ಯಾಪ್ತಿಗಳಲ್ಲಿ ಮೇ 5ರಂದು ಕ್ಷೇತ್ರವಾರು ಸಭೆ

Manjunath (4)
Photo Credit :

ಮಂಗಳೂರು: ಶ್ರೀ ಮಂಜುನಾಥ ಭಂಡಾರಿಯವರು, ವಿಧಾನ ಪರಿಷತ್ ಸದಸ್ಯರು ಗುರುಪುರ ಬ್ಲಾಕ್ ಕಾಂಗ್ರೆಸ್‌ನ ಜಿಲ್ಲಾ ಪಂಚಾಯತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮ ಪಂಚಾಯತಿ ಮಟ್ಟದಲ್ಲಿ ದಿನಾಂಕ 05-05-2022 ರಂದು ಪಕ್ಷದ ಚುನಾಯಿತರಾದ ಹಾಗೂ ಸ್ಪರ್ಧಿಸಿದ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತಿ ಸದಸ್ಯರು, ಪ್ರಮುಖ ನಾಯಕರು, ಕಾರ್ಯಕರ್ತರ ಜೊತೆ ಕ್ಷೇತ್ರವಾರು ಸಭೆಯನ್ನು ಹಮ್ಮಿಕೊಂಡಿರುತ್ತಾರೆ.

ಈ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಕೆ. ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕರಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕೊಲ್ನಾಡು ಹಾಗೂ ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಸುರೇಂದ್ರ ಕಾಂಬಿರವರು ಭಾಗವಹಿಸಲಿದ್ದಾರೆ.

ಗುರುಪರ ಬ್ಲಾಕ್ ವ್ಯಾಪ್ತಿಯ ಆಯಾ ಜಿಲ್ಲಾ ಪಂಚಾಯತ್ ಕ್ಷೇತ್ರವಾರು ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತ್‌ನ ಚುನಾಯಿತ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಎಲ್ಲಾ ಮಾಜಿ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಗ್ರಾಮ ಪಂಚಾಯತಿ ಸದಸ್ಯರು, ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ವಿನಂತಿ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು