News Karnataka Kannada
Monday, April 29 2024
ಮಂಗಳೂರು

ಗುರುವಾಯನಕೆರೆಯಲ್ಲಿ ಭಾನುವಾರ ಮಧ್ಯಾಹ್ನ ಟ್ರಾಫಿಕ್ ಜಾಮ್‌

Guru
Photo Credit :

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಭಾನುವಾರ ಮಧ್ಯಾಹ್ನ ಟ್ರಾಫಿಕ್ ಜಾಮ್‌ ಆಗಿ ವಾಹನ ಚಾಲಕರು ಪರದಾಡುವಂತಾಯಿತು. ಗುರುವಾಯನಕೆರೆ ಪೇಟೆಯಲ್ಲಿ ಟ್ರಾಫಿಕ್ ಜಾಂ ಆಗಿ ಬೆಳ್ತಂಗಡಿಯವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ಬೆಳ್ತಂಗಡಿಯಂದ ಗುರುವಾಯನಕೆರೆ ವರೆಗಿನ 3 ಕಿ.ಮೀ. ತಲುಪಲು ಒಂದು ಗಂಟೆಗೂ ಹೆಚ್ಚುಸಮಯ ಬೇಕಾಯಿತು. ನಿರಂತರ ಮಳೆಯೂ ಸುರಿಯುತ್ತಿದ್ದ ಕಾರಣ ವಾಹನ ಸವಾರರು ಇನ್ನಷ್ಟು ಸಮಸ್ಯೆ ಎದುರಿಸುವಂತಾಯಿತು.

ಗುರುವಾಯನಕೆರೆಯಲ್ಲಂತೂ ಸಂಪೂರ್ಣ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು. ಇಲ್ಲಿ ಅತ್ಯಂತ ಕಿರಿದಾದ ರಸ್ತೆಯಿದ್ದು ಭಾನುವಾರ ಕಾರ್ಯಕ್ರಮಗಳು ಹೆಚ್ಚಾಗಿದ್ದು ವಾಹನದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮಿಗೆ ಕಾರಣವಾಯಿತು.

ಟ್ರಾಫಿಕ್ ಜಾಮ್ ನಡುವೆ ಗುರುವಾಯನಕೆರೆಯಲ್ಲಿ ರೋಗಿಯೊಂದಿಗೆ ಬರುತ್ತಿದ್ದ ಆಂಬುಲೆನ್ಸ್ ಒಂದು ಸಿಲುಕಿಕೊಂಡಿದ್ದು ಟ್ರಾಫಿಕ್ ನಿಂದ ಹೊರಬರಲು ಪರದಾಡುವಂತಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು