News Karnataka Kannada
Monday, April 29 2024
ಮಂಗಳೂರು

ಗ್ರಾಮೀಣ ಭಾಗದಿಂದಲೂ ಆಮ್ ಆದ್ಮಿ ಪಾರ್ಟಿ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ

Untitled 1
Photo Credit :

ಮಂಗಳೂರು: ಆಮ್‌ ಆದ್ಮಿ ಪಾರ್ಟಿಯ ಗ್ರಾಮ ಸಂಪರ್ಕ ಅಭಿಯಾನ ಮುಂದುವರಿದಿದೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಭಿಯಾನ ನಡೆಯುತ್ತಿದ್ದು ಈಗಾಗಲೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಂದಲೂ ಬೆಂಬಲ ವ್ಯಕ್ತವಾಗಿದೆ ಎಂದು ಎಎಪಿ ತಿಳಿಸಿದೆ.

ಆಮ್‌ ಆದ್ಮಿ ಪಾರ್ಟಿಯ  ಕರಾವಳಿ ವಲಯ ಸಂಯೋಜಕರಾದ  ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ಮತ್ತು ಅಶೋಕ್‌ ಎಡಮಲೆ  ಹಾಗೂ  ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಟನೆ ಬಲಪಡಿಸಲಾಗುತ್ತಿದೆ. ಈಗಾಗಲೇ ಮಂಗಳೂರಿನಲ್ಲಿ ನಡೆದ ಕಾರ್ಯಕರ್ತರ ಸಭೆ ಬಳಿಕ ಸದಸ್ಯತ್ವ ಅಭಿಯಾನ ಚುರುಕುಗೊಂಡಿದ್ದು ಗ್ರಾಮೀಣ ಭಾಗದಿಂದಲೂ ಆಮ್‌ ಆದ್ಮಿ ಪಾರ್ಟಿ ಕಡೆಗೆ ಬೆಂಬಲ ವ್ಯಕ್ತವಾಗಿದೆ. ಹಲವು ವರ್ಷಗಳಿಂದ ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ದ ಕ ಜಿಲ್ಲೆಯಲ್ಲಿ ಕೋಮು ಅಶಾಂತಿಗಳಿಂದ ಅಭಿವೃದ್ಧಿ ಕುಂಟಿತವಾಗುತ್ತಿದೆ ಎನ್ನುವುದನ್ನು ಈಗಾಗಲೇ ಜನರು ತಿಳಿದುಕೊಂಡಿದ್ದು ಅಷ್ಟೆ ಅಲ್ಲದೇ ಯುವಕರಿಗೆ ಉದ್ಯೋಗದ ಕೊರತೆ, ಕೃಷಿಕರ ಸಮಸ್ಯೆಗಳಿಗೆ ಉತ್ತರ ಸಿಗುತ್ತಿಲ್ಲ, ಭ್ರಷ್ಟಾಚಾರ ಹೆಚ್ಚುತ್ತಿದೆ. ಇದೆಲ್ಲಾ ಕಾರಣಗಳು ಆಮ್‌ ಆದ್ಮಿ ಪಾರ್ಟಿ ಕಡೆಗೆ ಜನರು ಆಸಕ್ತರಾಗಲು ಕಾರಣವಾಗುತ್ತಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನ ಚುರುಕಾಗಿದ್ದು ಈಗಾಗಲೇ ಮಂಗಳೂರು ದಕ್ಷಿಣ ಶೇ.32 , ಮಂಗಳೂರು ಉತ್ತರ ಶೇ.16 ,ಮೂಡಬಿದ್ರೆ ಶೇ 16 , ಸುಳ್ಯ ಶೇ.11 , ಪುತ್ತೂರು ಶೇ 8, ಬೆಳ್ತಂಗಡಿ ಶೇ 3 , ಬಂಟ್ವಾಳ ಶೇ.7 , ಮಂಗಳೂರು ಶೇ 5.5  ರಷ್ಟು ಸದಸ್ಯತ್ವದ ಪ್ರಗತಿಯಾಗಿದೆ ಎಂದು ಸದಸ್ಯತ್ವ ಅಭಿಯಾನ ಪ್ರಮುಖರಾದ ವೇಣುಗೋಪಾಲ ಪುಚ್ಚಪ್ಪಾಡಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು