ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಚತುಷ್ಪಥ ಕಾಮಗಾರಿಯ ಅವಧಿಯಲ್ಲಿ ಮೆಲ್ಕಾರ್ ನಲ್ಲಿ ಕುಡಿಯವ ನೀರಿನ ಪೈಪ್ ಲೈನ್ ಹಾನಿಯಾದ ಬಗ್ಗೆ ಹಾಗೂ ಸಮಸ್ಯೆ ಪರಿಹಾರಕ್ಕೆ ಹೆದ್ದಾರಿ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಪುರಸಭೆ ಇಲಾಖೆ ಮತ್ತು ಜನಪ್ರತಿನಿಧಿಗಳ ಜೊತೆ ವಿಶೇಷ ಸಭೆ ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್ ಆವರ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ ಪುರಸಭಾ ಇಲಾಖೆಯ ಕಚೇರಿಯಲ್ಲಿ ನಡೆಯಿತು.
ಮೆಲ್ಕಾರ್ ಭಾಗದಲ್ಲಿ ಕಾಮಗಾರಿಯ ವೇಳೆ ಪೈಪ್ ಲೈನ್ ಗೆ ಹಾನಿಯಾದರೆ ಎಲ್ಲವನ್ನು ಹೆದ್ದಾರಿ ಇಲಾಖೆಯ ವತಿಯಿಂದಲೇ ದುರಸ್ತಿ ಆಗಬೇಕು, ಸಮಸ್ಯೆ ಎದುರಾದರೆ ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವಂತೆ ಅಧ್ಯಕ್ಷ ರು ಅಧಿಕಾರಿಗಳಿಗೆ ಸೂಚಿಸಿದರು.
ಹೆದ್ದಾರಿ ಅಧಿಕಾರಿಗೆ ಎಚ್ಚರಿಕೆ :
ಸಭೆಯಲ್ಲಿ ಚರ್ಚೆಯಾದ ವಿಚಾರಗಳನ್ನು ಮೇಲಾಧಿಕಾರಿಗಳಿಗೆ ವರದಿ ಒಪ್ಪಿಸುವ ಕಾರ್ಯ ಮಾಡಿದರೆ ಸಾಲದು , ಅಗತ್ಯವಾಗಿ ಅಲ್ಲಿನ ಸಮಸ್ಯೆ ಗಳಿಗೆ ಪರಿಹಾರ ಮಾಡುವ ಕೆಲಸ ಮಾಡಿ, ಇಲ್ಲದಿದ್ದರೆ ನಾನೇ ಮುಂಚೂಣಿ ಯಲ್ಲಿ ನಿಂತು ಜನಪ್ರತಿನಿಧಿಗಳು ಹಾಗೂ ಅಲ್ಲಿನ ಸಾರ್ವಜನಿಕರ ಜೊತೆ ಗುತ್ತಿಗೆದಾರರ ವಿರುದ್ಧ ಪ್ರತಿಭಟನೆ ನಡೆಸಿ , ಕಾಮಗಾರಿ ನಿಲ್ಲಿಸಲು ಒತ್ತಾಯ ಮಾಡುವುದಾಗಿ ಅವರು ಎಚ್ಚರಿಸಿದರು. ಕಾಮಗಾರಿಯ ವೇಳೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಂಸದ ಹಾಗೂ ಶಾಸಕರಿಗೂ ಮಾಹಿತಿ ನೀಡಿದ್ದೇವೆ.
ಸ್ಥಳೀಯ ಇಲಾಖೆಯನ್ನು ವಿಶ್ವಾಸ ಕ್ಕೆ ತೆಗೆದುಕೊಂಡು ಕಾಮಗಾರಿ ನಡೆಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆದ್ದಾರಿ ಕಾಮಗಾರಿ ಆರಂಭವಾಗುವ ಮುನ್ನವೆ ಮೂರು ಎಸ್ಟೆಮೇಟ್ ಗಳನ್ನುಇಲಾಖೆಗೆ ಕೊಟ್ಟಿದ್ದೇನೆ, ಅಬಳಿಕ ಹಲವಾರು ಗುತ್ತಿಗೆದಾರರು ಬದಲಾಗಿ ಪ್ರಸ್ತುತ ಕೆ.ಎನ್.ಆರ್.ಸಿ.ಕಂಪೆನಿ ಗುತ್ತಿಗೆ ವಹಿಸಿದೆ, ಕಂಪೆನಿ ಈ ಕೆಲಸ ಮಾಡಬೇಕು ಹೊರತು ಒಳಚರಂಡಿ ಇಲಾಖೆಗೆ ಅದು ಅನ್ವಯಿಸುವುದಿಲ್ಲ , ಆದರೆ ಸಾರ್ವಜನಿಕರಿಗೆ ಗೆ ತಪ್ಪು ಮಾಹಿತಿ ನೀಡಲಾಗಿದೆ ಒಳಚರಂಡಿ ಇಲಾಖೆಯ ಇಂಜಿನಿಯರ್ ಶೋಭಾ ಲಕ್ಷ್ಮೀ ಹೇಳಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಪುರಸಭೆ ಇಲಾಖೆ ಹಾಗೂ ಅಧಿಕಾರಿಗಳ ಸಂಪೂರ್ಣ ಸಹಕಾರ ಇದೆ, ಆದರೆ ಕಾಮಗಾರಿಯ ವೇಳೆ ಪುರಸಭೆಗೆ ಯಾವುದೇ ಮಾಹಿತಿ ನೀಡದೆ ಪುರಸಭೆಯ ನೀರಿನ ಪೈಪ್ ಗಳಿಗೆ ಹಾನಿಯಾಗುವಂತೆ ಮಾಡಿದ್ದಲ್ಲದೆ, ಸಾರ್ವಜನಿಕ ರ ಕುಡಿಯುವ ನೀರಿಗೆ ತೊಂದರೆ ನೀಡಿದ್ದು ಸರಿಯಾ ?, ಪುರಸಭಾ ಇಲಾಖೆಗೆ ಸೇರಿದ ಹಳೆಯ ಪೈಪ್ ಲೈನ್ ಗಳನ್ನು ವರ್ಗಾವಣೆ ಮಾಡಿ ಹೊಸ ಪೈಪ್ ಲೈನ್ ಅಳವಡಿಸಿಕೊಡಿ ಎಂದು ಪುರಸಭಾ ಸದಸ್ಯ ಮಹಮ್ಮದ್ ಸಿದ್ದೀಕ್ ಇಂಜಿನಿಯರ್ ಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಕನ್ಸ್ ಲ್ಟೆಂಟ್ ಇಂಜಿನಿಯರ್ ಲಿಖಿತ್ ಸ್ಪಂದಿಸಿ, ಅದಷ್ಟು ಶೀಘ್ರವಾಗಿ ಪೈಪ್ ಲೈನ್ ನ ಕೆಲಸ ಗುತ್ತಿಗೆದಾರರ ಮೂಲಕ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು. ಉಪಾಧ್ಯಕ್ಷೆ ಜೆಸಿಂತಾ ಡಿ’ಸೋಜ, ಸದಸ್ಯೆ ಗಾಯತ್ರಿ ಪ್ರಕಾಶ್, ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ,ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೊ, ಸಿಬ್ಬಂದಿ ಮೀನಾಕ್ಷಿ ಉಪಸ್ಥಿತರಿದ್ದರು.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.
ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10…
ಪವಾಡ ಪುರುಷ ಮಲೆ ಮಹದೇಶ್ವರ ಕೋಟಿ ಒಡೆಯನಾಗಿ ಮುಂದುವರೆಯುತ್ತಿದ್ದು, ಇದೀಗ 34 ದಿನಗಳ ಅಂತರದಲ್ಲಿ ಮೂರು ಕೋಟಿ ನಾಲ್ಕು ಲಕ್ಷದ…
ಅಶ್ಲೀಲ ವೀಡಿಯೋ ಪ್ರಕರಣ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿದ್ದು, ಅವರಿಗೆ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ…
ಉಡುಪಿ ಜಿಲ್ಲೆಯಾದ್ಯಂತ ಸಿ ಎನ್ ಜಿ ಬಂಕ್ ಗಳಲ್ಲಿ ಇಂಧನ ಕೊರತೆಯಿಂದ ರಿಕ್ಷಾ ಚಾಲಕರು ಗಂಟೆಗಟ್ಟಲೆ ಇಂಧನಕ್ಕಾಗಿ ಕಾಯುವ ಸನ್ನಿವೇಶ…
ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ…