News Karnataka Kannada
Monday, April 29 2024
ಮಂಗಳೂರು

ಚಾರ್ಮಾಡಿ ಕಾಡಾನೆಗಳ ದಾಳಿ: ಅಪಾರ ಪ್ರಮಾಣದ ಕೃಷಿ ಹಾನಿ

Elephant
Photo Credit :

ಬೆಳ್ತಂಗಡಿ: ಚಾರ್ಮಾಡಿ ಗ್ರಾಮಪಂಚಾಯತಿ ವ್ಯಾಪ್ತಿಯ ಮಠದ ಮಜಲು ಪರಿಸರದಲ್ಲಿ ಮೇ 13ರ ತಡರಾತ್ರಿ ಕಾಡಾನೆಗಳ ಹಿಂಡು ಕೃಷಿ ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಉಂಟು ಮಾಡಿವೆ.

ಇಲ್ಲಿನ ರವೀಂದ್ರ ರಾವ್ ಅವರ ತೋಟದಲ್ಲಿ 120 ಅಡಕೆ ಮರ, 60ಕ್ಕಿಂತ ಅಧಿಕ ಬಾಳೆ ಗಿಡ, ಅನಂತ ರಾವ್ ಅವರ ತೋಟದ 25ಕ್ಕಿಂತ ಅಧಿಕ ಅಡಕೆ ಮರ,18 ತೆಂಗಿನ ಮರ ಹಾಗೂ ಅಪಾರ ಪ್ರಮಾಣದ ಬಾಳೆಗಿಡಗಳನ್ನು ಧ್ವಂಸಗೊಳಿಸಿ ಲಕ್ಷಾಂತರ ರೂ. ಮೌಲ್ಯದ ಕೃಷಿ ಹಾನಿ ಉಂಟು ಮಾಡಿವೆ.

ಮರಿಯಾನೆ ಸಹಿತ ನಾಲ್ಕರಿಂದ ಐದು ಆನೆಗಳು ದಾಳಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಶನಿವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಗಾಗ ದಾಳಿ
ಮಠದ ಮಜಲು ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು ಕಳೆದ ಮೂರು ತಿಂಗಳಿನಿಂದ ಹಲವಾರು ಬಾರಿ ಒಂಟಿ ಸಲಗ ಸಹಿತ ಕಾಡಾನೆಗಳ ಹಿಂಡು ದಾಳಿ ನಡೆಸುತ್ತಿದ್ದು, ಇಲ್ಲಿನ ಕೃಷಿಕರ ತೋಟಗಳನ್ನು ನಾಶ ಮಾಡುತ್ತಿವೆ. ಆನೆ ದಾಳಿಯಿಂದ ಬೇಸತ್ತಿರುವ ಕೃಷಿಕರು ಇದಕ್ಕೊಂದು ಸೂಕ್ತ ಮಾರ್ಗೋಪಾಯ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು