News Karnataka Kannada
Friday, May 03 2024
ಮಂಗಳೂರು

ಚೈತ್ರಾ ಕುಂದಾಪುರ ಬಂಟ ಸಮುದಾಯದ ಬಗ್ಗೆಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು : ಮಾಜಿ ಶಾಸಕಿ ಶಕುಂತಳಾ ಶೆಟ್ಟಿ

Shakunthala Shetty
Photo Credit :

 ದಕ್ಷಿಣ ಕನ್ನಡ :   ಸಾರ್ವಜನಿಕ ಕಾರ್ಯಕ್ರಮ ಕಾರ್ಯಕ್ರಮವೊಂದರಲ್ಲಿ ಚೈತ್ರಾ ಕುಂದಾಪುರ ಬಂಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರು ಮಾಡಿರುವ ಆರೋಪವನ್ನು ಸಾಬೀತುಪಡಿಸಬೇಕು ಇಲ್ಲವಾದಲ್ಲಿ ಇಡೀ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಆಗ್ರಹಿಸಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ರು, ಚೈತ್ರಾ ಕುಂದಾಪುರ ಪ್ರಚೋದನಕಾರಿ ಭಾಷಣದ ಜತೆಗೆ ಬಂಟ ಸಮುದಾಯ ಹಾಗೂ ಬಿಲ್ಲವ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದರು.

ಬಂಟ ಸಮುದಾಯದವರು ಪಕ್ಷದ ರಾಜ್ಯಾಧ್ಯಕ್ಷರಾಗಿರುವಾಗ, ಆಕೆ ಭಾಷಣ ಮಾಡಿದ ಜಾಗದಲ್ಲಿ ಬಂಟ ಸಮುದಾಯ ಪ್ರತಿನಿಧಿ ಶಾಸಕರಾಗಿರುವಾಗ, ಬಂಟ ಸಮುದಾಯದ ಹೆಣ್ಣು ಮಗಳನ್ನು ಅವಮಾನಿಸಲು ಅವರೇ ಕುಮ್ಮಕ್ಕು ನೀಡಿದ್ದರೇ ಎಂಬುದನ್ನು ಸ್ಪಷ್ಟಪಡಿಸಬೇಕು. ಬಿಲ್ಲವ ಸಮುದಾಯದ ಪೂಜನೀಯ ಆಯುಧ ಸುರ್ಯವನ್ನು ತಲವಾರಿಗೆ ಹೋಲಿಕೆ ಮಾಡಿ ಮಾತನಾಡಿದರೂ ಅದೇ ಸಮುದಾಯದದವರಾದ ಬಿಜೆಪಿಯ ಜಿಲ್ಲಾಧ್ಯಕ್ಷರು, ಸಮುದಾಯ ಇಬ್ಬರು ಸಚಿವರು ಮಾನವಾಗಿರುವುದು ಏನನ್ನು ಸೂಚಿಸುತ್ತದೆ. ನೀವು ಮಾತನಾಡುವಾಗ ಅಲ್ಲಿ ಬಿಲ್ಲವ ಯುವಕರು, ಬಂಟ ಯುವಕರು ಇರಲಿಲ್ಲವೇ…? ನಾಲಗೆ ಹರಿಬಿಡುವ ವೇಳೆ ಜಾಗೃತೆ ಇರಲಿ ಎಂದು ಚೈತ್ರಾ ಕುಂದಾಪುರ ಹೇಳಿಕೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅನೈತಿಕ ಪೊಲೀಸ್‌ಗಿರಿಯನ್ನು ಪ್ರಶ್ನಿಸುವ ಮಹಿಳಾ ನಾಯಕಿಯರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅವಮಾನಿಸುವ, ನಿಂದಿಸುವುದು, ಮಾನಸಿಕ ಹಿಂಸೆ ನೀಡುವುದು ಹಿಂದೂ ಧರ್ಮದ ಸಂಸ್ಕೃತಿಯಲ್ಲ ಎಂದು ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ನಾಯಕಿಯರಾದ ಅಪ್ಪಿ, ಸುರೇಖಾ ಚಂದ್ರಹಾಸ್, ಚಂದ್ರಕಲಾ, ಮಲ್ಲಿಕಾ, ತನ್ವೀರ್, ಗೀತಾ ಅತ್ತಾವರ ಮೊದಲಾವದರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು