News Karnataka Kannada
Sunday, May 05 2024
ಮಂಗಳೂರು

ಜೀವ ರಕ್ಷಕ ವ್ಯವಸ್ಥೆ ಬಲಪಡಿಸಲು ಮುಖ್ಯಮಂತ್ರಿಗಳಲ್ಲಿ  ಮನವಿ ಮಂಜುನಾಥ ಭಂಡಾರಿ

Mangalore
Photo Credit :

ಕರಾವಳಿ ಕಡಲ ತೀರಗಳಲ್ಲಿ ದುರ್ಘಟನೆಗಳನ್ನು ತಪ್ಪಿಸಲು ಹೆಚ್ಚಿನ ಸುರಕ್ಷತಾ ಮತ್ತು ಜೀವ ರಕ್ಷಕ ವ್ಯವಸ್ಥೆಗಳನ್ನು ಬಲಪಡಿಸುವ ಬಗ್ಗೆ ವಿಧಾನ ಪರಿಷತ್ ನ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕರಾವಳಿ ತೀರದ ಸುಮಾರು 300 ಕಿಲೋ ಮೀಟರ್ ಉದ್ದದ ಸಮುದ್ರ ತೀರವನ್ನು ಹೊಂದಿದ್ದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಈ 3 ಜಿಲ್ಲೆಗಳ ವ್ಯಾಪ್ತಿಗೆ ಒಳಪಟ್ಟಿದೆ. ಈ ಸಮುದ್ರ ತೀರಕ್ಕೆ ಹಲವಾರು ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ರಜಾ ದಿನಗಳಲ್ಲಿ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬರುತ್ತಾರೆ. ಆದರೆ ಇಷ್ಟೊಂದು ಪ್ರವಾಸಿಗರು ಬರುವ ಈ ಸಮುದ್ರ ತೀರದಲ್ಲಿ  ಯಾವುದೇ ಸುರಕ್ಷತಾ ವ್ಯವಸ್ಥೆ ಇಲ್ಲದ ಕಾರಣ ಹಲವಾರು ದುರ್ಘಟನೆಗಳು ನಡೆದು ಮಾನವ ಜೀವಗಳು ಹಾನಿಯಾಗಿವೆ ಎಂದು ಮಂಜುನಾಥ ಭಂಡಾರಿ ಅವರು ಹೇಳಿದ್ದಾರೆ.

ಇತ್ತೀಚೆಗೆ ಕೇರಳ ರಾಜ್ಯದ ಕೊಟ್ಟಯಂ ಜಿಲ್ಲೆಯ ಮಂಗಳ ಇಂಜಿನಿಯರಿಂಗ್  ಕಾಲೇಜಿನ ಮೂರು ವಿದ್ಯಾರ್ಥಿಗಳು ಉಡುಪಿ ಜಿಲ್ಲೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ನೀರು ಪಾಲಾಗಿ ಪ್ರಾಣ ಕಳೆದು ಕೊಂಡಿರುವ ಅತ್ಯಂತ ಹೃದಯ ವಿದ್ರಾವಕ ಘಟನೆಯನ್ನು ಉಲ್ಲೇಖಿಸಿದ ಅವರು ಕರಾವಳಿ ಕಡಲ ತೀರದಲ್ಲಿ ಇಂತಹ ದುರ್ಘಟನೆಗಳು ಈ ಹಿಂದೆಯೂ ಹಲವಾರು ಬಾರಿ ನಡೆದಿದ್ದು ಲೆಕ್ಕವಿಲ್ಲದಷ್ಟು ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ.

ಆದ್ದರಿಂದ ಇಂತಹ ಅವಘಡಗಳನ್ನು ತಪ್ಪಿಸುವ ಸಲುವಾಗಿ ಪ್ರವಾಸಿಗರಿಗೆ ಸಮುದ್ರ ತೀರದಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮವಹಿಸಿ ಜೀವರಕ್ಷಕ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸ ಬೇಕು ಹಾಗೂ ಕಡಲ ತೀರದ ಸೂಕ್ಷ್ಮ ಪ್ರದೇಶಗಳಿಗೆ ಕಬ್ಬಿಣದ ತಡೆ ಬೇಲಿಗಳನ್ನು ಹಾಕಿ ಮುನ್ನೆಚ್ಚರಿಕೆ ಸೂಚನಾ ಫಲಕಗಳನ್ನು ಅಳವಡಿಸಿ ಪೋಲಿಸ್ ಮತ್ತು ಕೋಸ್ಟ್ ಗಾರ್ಡ್ ವ್ಯವಸ್ಥೆಯ ಮೂಲಕ ಸಮುದ್ರ ತೀರದಲ್ಲಿ ಗಸ್ತು ವ್ಯವಸ್ಥೆಯನ್ನು ನಿಯೋಜಿಸುವಂತೆ ಮುಖ್ಯಮಂತ್ರಿಗಳಿಗೆ ಬರೆದು ಪತ್ರದಲ್ಲಿ ಕೋರಿದರು. ಹಾಗೂ ಸಂಬಂಧಪಟ್ಟ ಜಿಲ್ಲಾಡಳಿತಕ್ಕೂ ಹಾಗೂ ಪ್ರವಾಸೋದ್ಯಮ ಇಲಾಖೆಗೂ ಈ ರೀತಿಯ ದುರ್ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳುವಂತೆ ಆದೇಶಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು