ಮಂಗಳೂರು

ಜೂನ್ 25ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್: ನ್ಯಾ. ರವೀಂದ್ರ ಎಂ ಜೋಷಿ

ಮಂಗಳೂರು: ಮುಂಬರುವ ಜೂನ್ 25ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಅದರ ಅಂಗವಾಗಿ ಜಿಲ್ಲೆಯ ನಾಗರೀಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ರವೀಂದ್ರ ಎಂ. ಜೋಶಿ ಅವರು ತಿಳಿಸಿದರು.

ಅವರು ನಗರದ ನ್ಯಾಯಾಲಯಗಳ ಸಂಕಿರ್ಣದಲ್ಲಿ ಮೇ. 27 ರ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜೂನ್ 25ರ ನಾಲ್ಕನೇ ಶನಿವಾರ ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ, ಇದರಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದು ಹೇಳಿದರು.

ಪರಸ್ಪರ ಇಬ್ಬರಿಗೂ ಒಪ್ಪಿಗೆಯಾಗುವಂತಹ ಪ್ರಕರಣಗಳು ತೀರ್ಮಾನ ವಾಗುವುದರಿಂದ ಬಾಂಧವ್ಯಗಳು ಉಳಿದು ವಿವಾದವು ತೀರ್ಮಾನವಾಗುತ್ತದೆ, ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಇದರಲ್ಲಿ ಅವಕಾಶ ಕಲ್ಪಿಸಲಾಗಿದೆ, ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಮರುಪಾವತಿಸಲಾಗುವುದು, ಮುಖ್ಯವಾಗಿ ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದಾಗಿದೆ, ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟಾರೆ 52,238 ಪ್ರಕರಣಗಳು ಬಾಕಿ ಉಳಿದಿವೆ, ಅವುಗಳಲ್ಲಿ 4040 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳು ಎಂದು ಇದುವರೆಗೂ ಗುರುತಿಸಲಾಗಿದೆ, ಅವುಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಲೋಕ್ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಕೆಲವೊಂದು ರಾಜಿಯಾಗಲ್ಲ ಕ್ರಿಮಿನಲ್ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲು ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಿಸಿದ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ಶುಲ್ಕಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಹಾಗೂ ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜಿಯಾಗಬಲ್ಲ ಸಿವಿಲ್ ಹಾಗೂ ಇತರೆ ಪ್ರಕರಣಗಳು, ವಿಚ್ಛೇದನ ಹೊರತುಪಡಿಸಿದಂತೆ ಕೌಟುಂಬಿಕ ಹಾಗೂ ವೈವಾಹಿಕ ನ್ಯಾಯಾಲಯದ ಪ್ರಕರಣಗಳನ್ನು ಲೋಕ್ ಅದಾಲತ್ ನಲ್ಲಿ ರಾಜಿ ಮೂಲಕ ಇತ್ಯರ್ಥ ಪಡಿಸಿ ಕೊಳ್ಳಬಹುದಾಗಿದೆ ಎಂದು ಅವರು ವಿವರ ನೀಡಿದರು.

ಪೋಕ್ಸೋ-1ರ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಪೃಥ್ವಿರಾಜ್ ವರ್ಣೇಕರ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳಾದ ಮಧುಕರ್ ಭಾಗವತ್ ಗೋಷ್ಠಿಯಲ್ಲಿದ್ದರು.

Sneha Gowda

Recent Posts

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

3 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

4 mins ago

ತ್ರಿವಳಿ ತಲಾಖ್‌ನಿಂದ ನೊಂದು ಹಿಂದೂ ಯುವಕನ್ನು ಮದುವೆಯಾದ ಮುಸ್ಲಿಂ ಮಹಿಳೆ

ತ್ರಿವಳಿ ತಲಾಖ್‌ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…

23 mins ago

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್​​ ಫೈರ್; ಯುವಕ ಸಾವು

ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…

33 mins ago

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

48 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

1 hour ago