News Karnataka Kannada
Thursday, May 02 2024
ಮಂಗಳೂರು

ಜೋಸೆಫ್ ಸಿ. ಹೃದಯಾಘಾತದಿಂದ ನಿಧನ

New Project 2021 09 15t175401.540
Photo Credit :

ಬೆಳ್ತಂಗಡಿ: ಇಲ್ಲಿಯ ಸಾಂತೋಮ್ ಟವರ್‍ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56)ರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ.

ಇಂದು ಮಧ್ಯಾಹ್ನ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಇವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅದೇ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ಕ್ಲಿನಿಕ್‌ನ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆಯನ್ನು ನೀಡಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಇವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಜ್ಞಾನ ನಿಲಯದ ಧರ್ಮೋಪದೇಶ ಕೇಂದ್ರದಲ್ಲಿ ಸುಮಾರು 10 ವರ್ಷಗಳ ಕಾಲ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ, ಬಳಿಕ ಸಿರಿಯನ್ ಕಥೊಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ 11 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು.

ಮೃತರು ಪತ್ನಿ ಸಿಂಧೂ ಜೋಸೆಫ್, ಪುತ್ರರಾದ ಜೋನ್ಸನ್ ಪಿ.ಜೆ, ರೋಷನ್ ಪಿ.ಜೆ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು