News Karnataka Kannada
Monday, May 06 2024
ಮಂಗಳೂರು

ಟೆಲಿ ಐಸಿಯು ವ್ಯವಸ್ಥೆ ದ.ಕ.ಜಿಲ್ಲೆಯಲ್ಲಿ ಬಂಟ್ವಾಳಕ್ಕೆ ದೊರಕಿದೆ:ಶಾಸಕ ರಾಜೇಶ್ ನಾಯ್ಕ್

Rajesh Naik
Photo Credit :
ಬಂಟ್ವಾಳ: ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಾದ ರೋಗಿಯನ್ನು ಅಗತ್ಯವಿದ್ದರೆ, ಟೆಲಿ ವ್ಯವಸ್ಥೆ ಮೂಲಕ ಚಿಕಿತ್ಸೆ ಸಲಹೆ ಪಡೆದು ಚಿಕಿತ್ಸೆ ನೀಡುವ ಸುಧಾರಿತ ವ್ಯವಸ್ಥೆಯನ್ನು ಕಲ್ಪಿಸುವ ಟೆಲಿ ಐಸಿಯು ವ್ಯವಸ್ಥೆ ದ.ಕ.ಜಿಲ್ಲೆಯಲ್ಲಿ ಬಂಟ್ವಾಳಕ್ಕೆ ದೊರಕಿದೆ  ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ 25 ಬೆಡ್ ಗಳ ಹವಾನಿಯಂತ್ರಿತ ವ್ಯವಸ್ಥೆ ಅನುಷ್ಠಾನ ಕಾಮಗಾರಿಯನ್ನು ವೀಕ್ಷಿಸಿ ಅವರು ಮಾತನಾಡಿದರು.
ಮೊದಲು ಬಂಟ್ವಾಳದಲ್ಲಿ 3 ಐಸಿಯು ಬೆಡ್ ಗಳು ಮಾತ್ರ ಇತ್ತು, ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ 25 ಹೆಚ್ಚುವರಿ ಐಸಿಯು ಬೆಡ್ ಗಳನ್ನು ಒದಗಿಸಲಾಗಿದ್ದು, ಹೆಚ್ಚು ಅನುಕೂಲಕರವಾಗಲಿದೆ ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ 7 ಡಯಾಲಿಸಿಸ್ ಘಟಕಗಳಿದ್ದು, ದಿನವೊಂದಕ್ಕೆ 25 ಮಂದಿಗೆ ಡಯಾಲಿಸಿಸ್ ನಡೆಯುತ್ತಿದೆ. ಶವಶೈತ್ಯಾಗಾರ ಸಹಿತ ವಿವಿಧ ಮೂಲಸೌಕರ್ಯಗಳು ಇವೆ ಎಂದು ಶಾಸಕರು ಹೇಳಿದರು.
ಅಮೃತ್ ಆರೋಗ್ಯ ಯೋಜನೆಯಡಿ ಬಂಟ್ವಾಳ ತಾಲೂಕಿಗೆ 1 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಬೆಂಜನಪದವು, ರಾಯಿ, ನಾವೂರು ದೈವಸ್ಥಳ ಹಾಗೂ ಪುಣಚ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಿಗೆ ತಲಾ 20 ಲಕ್ಷ ರೂ ನಂತೆ ಒಟ್ಟು 1 ಕೋಟಿ ರೂ ಅನುದಾನಬಿಡುಗಡೆಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.
ಆಡಳಿತ ವೈದ್ಯಾಧಿಕಾರಿ ಡಾ. ಪುಷ್ಪಲತಾ, ತಾಲೂಕು ಆರೋಗ್ಯಾಧಿಕಾರಿ ಡಾ. ಜಯಪ್ರಕಾಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಇ.ಪಿ.ಶೆಟ್ಟಿ, ಪುರಸಭೆ ಸದಸ್ಯ ಹರಿಪ್ರಸಾದ್, ಪ್ರಮುಖರಾದ ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಪ್ರಕಾಶ್ ಅಂಚನ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ವಿಶ್ವನಾಥ ಚಂಡ್ತಿಮಾರ್ ಈ ಸಂದರ್ಭ ಉಪಸ್ಥಿತರಿದ್ದರು. ಇದೇ ವೇಳೆ ಶಾಸಕರು ಆಸ್ಪತ್ರೆಯ ಅಭಿವೃದ್ಧಿ ಕೆಲಸಗಳ ಯೋಜನೆಯನ್ನು ಪರಿಶೀಲಿಸಿದರು. ಹೊಸ ವ್ಯವಸ್ಥೆಗಳು ನಿರ್ಮಾಣವಾದಾಗ ಸಿಬ್ಬಂದಿ ಕೊರತೆಯಾಗದಂತೆ ಭವಿಷ್ಯದಲ್ಲಿ ಗಮನಹರಿಸುವುದಾಗಿ ಶಾಸಕರು ಈ ಸಂದರ್ಭ ಭರವಸೆ ನೀಡಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು