ಮಂಗಳೂರು: ನಗರದ ಸ್ಟೇಟ್ ಬ್ಯಾಂಕಿನ ಹ್ಯಾಮಿಲ್ಟನ್ ಸರ್ಕಲ್ ಅನ್ನು ಈಗಾಗಲೇ ಅಭಿವೃದ್ಧಿಯ ಉದ್ದೇಶದಿಂದ ತೆಗೆಯಲಾಗಿದ್ದು ಅಲ್ಲಿ ಇದೀಗ ಟ್ರಾಫಿಕ್ ನಿರ್ಮಾಣಕ್ಕೆ ಸ್ಮಾರ್ಟ್ ಸಿಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಆದರೆ ಸಂಚಾರ ದಟ್ಟಣೆ ಇರುವ ಸ್ಟೇಟ್ ಬ್ಯಾಂಕಿನಲ್ಲಿ ಟ್ರಾಫಿಕ್ ಐಲ್ಯಾಂಡ್ ಮಾಡುವ ಮೂಲಕ ಮತ್ತಷ್ಟು ಸಂಚಾರದಟ್ಟಣೆಗೆ ಅವಕಾಶ ನೀಡಿದಂತಾಗುತ್ತದೆ, ಹೀಗಾಗಿ ವಿಸ್ತಾರವಾದ ಟ್ರಾಫಿಕ್ ಐಲ್ಯಾಂಡ್ ಇಲ್ಲಿ ಸೂಕ್ತವಲ್ಲ ಎಂಬ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ವ್ಯಕ್ತವಾಗಿದೆ. ಹ್ಯಾಮಿಲ್ಟನ್ ಸರ್ಕಲ್ ಇದ್ದ ಜಾಗದಲ್ಲಿ ಕಲ್ಲುಗಳನ್ನಿಟ್ಟು ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹೀಗಾಗಿ ವಾಹನ ಸವಾರರಿಗೆ ಸಂಚಾರ ಗೊಂದಲ ಉಂಟಾಗಿದೆ. ಈ ಮಧ್ಯೆ ಜಿಲ್ಲಾಧಿಕಾರಿ ಕಚೇರಿ ಭಾಗದಿಂದ ಬರುವ ವಾಹನಗಳು ಹಂಪನಕಟ್ಟೆ ಕಡೆಗೆ ತೆರಳಲು ಯೂಟರ್ನ್ ತೆಗೆಯುವ ಹೊಸ ನಿಯಮ ಜಾರಿ ತರಲಾಗಿದೆ .
ಸ್ಟೇಟ್ ಬ್ಯಾಂಕ್ ಬಳಿ ಇರುವ ರಸ್ತೆಯನ್ನು ಅವೈಜ್ಞಾನಿಕ ರೀತಿಯಲ್ಲಿ ಬಳಸಿಕೊಂಡು ದೊಡ್ಡ ದೊಡ್ಡ ಲಾರಿಗಳು ತಿರುಗದ ರೀತಿಯಲ್ಲಿ ಕಲ್ಲುಗಳನ್ನಿಟ್ಟು ರಸ್ತೆಯನ್ನು ಹಾಳು ಮಾಡಲಾಗುತ್ತಿದೆ ಎಂಬುದು ಸ್ಥಳೀಯರ ಆಕ್ಷೇಪ .ರಸ್ತೆಯಲ್ಲಿ ಕಲ್ಲುಗಳನ್ನಿಟ್ಟು ಕೆಲಸ ಮಾಡುವ ಸಂದರ್ಭ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾಗಿತ್ತು ಸಂಚಾರ ಸಮಸ್ಯೆ ಆಗಲಿದೆ ಎಂಬ ಬಗ್ಗೆ ಸ್ಥಳೀಯರು ಹೇಳಿದಾಗ ನಗರಸಭೆ ಸುಂದರವಾಗಬೇಕು ಎಂಬ ಕಾರಣದಿಂದ ಹೀಗೆ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಎಂಜಿನಿಯರ್ ಗಳು ತಿಳಿಸಿದರು. ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗದೆ ನಗರ ಸುಂದರ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸ್ಥಳೀಯರು ಇದೇ ವೇಳೆ ಆಕ್ಷೇಪ ವ್ಯಕ್ತಪಡಿಸಿದರು.