ಮಂಗಳೂರು: ಬೆಳ್ತಂಗಡಿಯಲ್ಲಿ ವರ್ಷದ ಹಿಂದೆ ತಂದೆಯನ್ನು ಕೊಲೆ ಮಾಡಿದ ಪ್ರಕರಣದ ವಿಚಾರಣೆಗೆ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದಿದ್ದು ಪುತ್ರನ ಮೇಲಿನ ಆರೋಪ ಸಾಬೀತಾಗಿದೆ.
2019ರ ಜನವರಿ 18ರಂದು ಬೆಳ್ತಂಗಡಿ ತಾಲ್ಲೂಕಿನ ಗರ್ಡಾಡಿ ಗ್ರಾಮದ ನಿವಾಸಿ ಶ್ರೀಧರ ಪೂಜಾರಿ ಅವರ ಪುತ್ರ ಹರೀಶ್ ಪೂಜಾರಿ 28 ಕೊಲೆ ಮಾಡಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .
ಆರೋಪಿ ಹರೀಶ್ ಪೂಜಾರಿ ಅನ್ಯ ಜಾತಿಯ ಹುಡುಗಿಯನ್ನು ಪ್ರೀತಿಸಿದ್ದು ಅವರ ಮದುವೆಗೆ ವಿರೋಧವಿತ್ತು .ಪುತ್ರಿಯ ಹರೀಶನ ಸಹೋದರಿ ಮದುವೆಯಾಗದೆ ಪುತ್ರನ ಮದುವೆ ಮಾಡುವುದಿಲ್ಲ ಎಂದು ತಂದೆ ಶ್ರೀಧರ ಪೂಜಾರಿ ತಿಳಿಸಿದ್ದರು ಇದರಿಂದ ಮನೆಮಂದಿಯ ಜತೆ ಮನಸ್ತಾಪ ಹೊಂದಿದ್ದ ಹರೀಶ್ಹ ತನ್ನ ಪ್ರೇಯಸಿ ಜತೆ ಮನೆ ಬಿಟ್ಟು ಹೋಗಿದ್ದ ಆದರೆ 3ವಾರಗಳ ಬಳಿಕ ವಾಪಸ್ ಬಂದಾಗ ಪುತ್ರನಿಗೆ ಆತನ ಪ್ರೇಯಸಿಯ ಜತೆ ಮನೆ ಸೇರಲು ತಂದೆ ಆಕ್ಷೇಪಿಸಿದರು ಈ ನೆಲೆಯಲ್ಲಿ ಅವರಿಬ್ಬರ ಮಧ್ಯೆ ಗಲಾಟೆ ನಡೆದಿತ್ತು .
ಈ ಸಂದರ್ಭ ಹರೀಶ್ ತನ್ನ ತಂದೆ ಶ್ರೀಧರ ಪೂಜಾರಿ ಅವರಿಗೆ ಕೊಲೆ ಬೆದರಿಕೆ ಹಾಕಿ ಹೋಗಿದ್ದ ಬಳಿಕ ಅದೇ ದಿನ ಸಂಜೆ 6ಮೂವತ್ತು ಕ್ಕೆ ತಂದೆ ಸಮೀಪದ ಪೇಟೆಗೆ ಹೋಗಿ ಮನೆಗೆ ಬಂದಾಗ ಪುತ್ರ ಹರೀಶ್ ಮರದ ಪಕ್ಕಾಸು ನಿಂದ ತಂದೆಯ ತಲೆ ಮತ್ತು ಮುಖಕ್ಕೆ ಗಂಭೀರವಾಗಿ ಹೊಡೆದಿದ್ದ ಇದರಿಂದ ತೀವ್ರ ಗಾಯಗೊಂಡಿದ್ದ ಶ್ರೀಧರ್ ಪೂಜಾರಿ ಆಸ್ಪತ್ರೆಗೆ ದಾಖಲುಮಾಡುವಷ್ಟಲ್ಲಿ ಸಾವನ್ನಪ್ಪಿದ್ದರು .
ಕೊಲೆ ಪ್ರಕರಣದ ವಿಚಾರಣೆಯನ್ನು ಮಂಗಳೂರಿನ ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಬಿ ಆರ್ ಪಲ್ಲವಿಯವರು ಪೂರ್ಣಗೊಳಿಸಿದ್ದು ಆರೋಪಿ ಹರೀಶ್ ಪೂಜಾರಿ ದೋಷಿಯೆಂದು ತೀರ್ಪು ನೀಡಿದ್ದಾರೆ