ಮಂಗಳೂರು, ಜ. 19: “ತುಳು ಕೊಡವ” ಭಾಷೆಗಳು ರಾಜ್ಯದ ಅತ್ಯಂತ ಪ್ರಾಚೀನ ಭಾಷೆಗಳು. ಈ ಭಾಷೆಯ ಅಳಿವು ಉಳಿವು ಅಲ್ಲಿನ ಜನರ ಅಳಿವು ಉಳಿವಿನ ಪ್ರಶ್ನೆ ಕೂಡ ಹೌದು. ಈ ಹಿನ್ನೆಲೆಯಲ್ಲಿ ಈ ಭಾಷೆಗಳನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸ ಬೇಕೆಂದು ಆಗ್ರಹಿಸಿ ಸಂಸತ್ತಿನಲ್ಲಿ ಬಿ ಕೆ ಹರಿಪ್ರಸಾದ್ ಅವರು ನಿರಂತರವಾಗಿ ಆಗ್ರಹವನ್ನು ಮಾಡಿದ್ದರು.
ಅವರ ಭಾಷಣದ ಭಾಗವಾದ ತುಳು ಕೊಡುವ ಭಾಷೆಗಳ ಕುರಿತಾದ ಪುಸ್ತಕ ತುಳು ಕೊಡವ ಭಾಷೆಗಳ ಅಳಿವು ಉಳಿವು ಬಿಡುಗಡೆ ಸಮಾರಂಭ ಶುಕ್ರವಾರ ಜ. 21 ರಂದು ಸಂಜೆ 3 ಗಂಟೆಗೆ ಮಂಗಳೂರಿನ ಸಹೋದಯ, ಇನ್ಸ್ಟಷನ್ ಆಫ್ ಕರ್ನಾಟಕ ಕ್ರಿಶ್ಚಿಯನ್ ಎಜುಕೇಷನ್ ಸೊಸೈಟಿ, ಬಲ್ಮಠದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನಪರಿಷತ್ ಸದಸ್ಯರು ಮತ್ತು ಮಾಜಿ ಸಂಸದರಾದ ಶ್ರೀ. ಬಿ.ಕೆ ಹರಿಪ್ರಸಾದ್ ವಹಿಸಲಿದ್ದಾರೆ. ಜಾನಪದ ವಿದ್ವಾಂಸರು ಹಾಗೂ ವಿಶ್ರಾಂತ ಕುಲಪತಿಗಳಾದ ಪ್ರೊ. ಕೆ ಚಿನ್ನಪ್ಪಗೌಡ ಅವರು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಾರ್ತಾಭಾರತಿ ದಿನ ಪತ್ರಿಕೆ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆ ಇರಲಿದ್ದಾರೆ. ಹಿರಿಯ ಪತ್ರಕರ್ತ ಹಾಗೂ ಕೃತಿ ಸಂಪಾದಕರಾದ ಆರ್ ಜಯಕುಮಾರ್ ಉಪಸ್ಥಿತರಿಲಿದ್ದಾರೆ.
ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಲಗತ್ತಿಸಲಾಗಿದ್ದು, ನಿಮ್ಮ ಗೌರವಾನ್ವಿತ ಪತ್ರಿಕೆಯಲ್ಲಿ ಕಾರ್ಯಕ್ರಮದ ಬಗ್ಗೆ ಪ್ರಕಟಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಹಾಗೂ ಕಾರ್ಯಕ್ರಮದ ವರದಿಗೆ ನಿಮ್ಮ ಪತ್ರಿಕೆಯ ಪ್ರತಿನಿಧಿಗಳನ್ನು ಕಳುಹಿಸಿಕೊಡುವಂತೆ ಕೋರಿದೆ.
ಪ್ರಜ್ವಲ್ ರೇವಣ್ಣ ಯಾವುದೇ ದೇಶದಲ್ಲಿ ಇದ್ದರೂ ಹಿಡಿದು ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ಕೇಂದ್ರ ಸರ್ಕಾರ ಪ್ರಜ್ವಲ್ ರಕ್ಷಣೆ…
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಐಟಿ ತನಿಖೆ ಚುರುಕಾಗಿದೆ. ಇಂದು ಬೆಳ್ಳಂಬೆಳಗ್ಗೆ ಎಸ್ಐಟಿ ಅಧಿಕಾರಿಗಳ ತಂಡ ಹಾಸನ…
ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು, ವಿಜ್ಡಮ್ ಸಂಸ್ಥೆಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಮೇ 4ರಂದು ಬೆಳಿಗ್ಗೆ 9 ರಿಂದ ಸಂಜೆ 4:30ರವರೆಗೆ…
ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್ ಸಮೀಪ…
ಎಪ್ರಿಲ್ ತಿಂಗಳಲ್ಲಿ ಮಳೆಯ ಆರ್ಭಟಕ್ಕೆ ನಲುಗಿದ್ದ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತೆ ಮಳೆ ಪ್ರಾರಂಭವಾಗಿದೆ. ಮರಳುಗಾಡು ದುಬೈ ಮಳೆಯಿಂದಾಗಿ ತತ್ತರಿಸಿ…
ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.