Categories: ಮಂಗಳೂರು

ತೊಕ್ಕೋಟು: ದೇಶದ ಸ್ವಾತಂತ್ರ್ಯಕ್ಕಾಗಿ ಕಾರ್ಮಿಕ ವರ್ಗ ನಡೆಸಿದ ಚಳುವಳಿ ಅವಿಸ್ಮರಣೀಯ

ತೊಕ್ಕೋಟು: ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಸರ್ವ ವಿಭಾಗದ ಜನತೆ ಭಾಗವಹಿಸಿದ್ದರೂ ಅದರಲ್ಲಿ ಕಾರ್ಮಿಕ ವರ್ಗ ನಡೆಸಿದ ಚಳುವಳಿಯಂತೂ ತೀರಾ ಅವಿಸ್ಮರಣೀಯವಾಗಿದೆ. ಅಂದು ಬ್ರಿಟಿಷರು ಜಾರಿಗೆ ತಂದಿದ್ದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರಬಲ ಹೋರಾಟ ನಡೆಸಿದ್ದ ಕಾರ್ಮಿಕ ವರ್ಗ ಇಂದೂ ಕೂಡ ಆಳುವ ವರ್ಗದ ಆಕ್ರಮಣಕಾರಿ ನೀತಿಗಳನ್ನು ಹಿಮ್ಮೆಟ್ಟಿಸಲು ಸಮರಶೀಲ ಹೋರಾಟದತ್ತ ಮುನ್ನುಗ್ಗುತ್ತಿದೆ. ಆಳುವ ವರ್ಗದ ವಿನಾಶಕಾರಿ ಆರ್ಥಿಕ ನೀತಿಗಳು ಹಾಗೂ ಕೋಮುವಾದಿ ಅಜೆಂಡಾದಿಂದಾಗಿ ದೇಶದ ಸ್ವಾತಂತ್ರ್ಯಕ್ಕೆ ಮತ್ತೆ ಅಪಾಯ ಬಂದೊದಗಿದ್ದು,ದೇಶ ಉಳಿಸುವ ಮೂಲಕ ಜನತೆಯ ಬದುಕನ್ನು ರಕ್ಷಿಸಲು ಕಾರ್ಮಿಕ ವರ್ಗ ಕಟಿಬದ್ದರಾಗಬೇಕಾಗಿದೆ ಎಂದು CITU ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ವಸಂತ ಆಚಾರಿಯವರು ಸೇರಿದ್ದ ಕಾರ್ಮಿಕರಿಗೆ ಕರೆ ನೀಡಿದರು.
ಅವರು ತೊಕ್ಕೋಟುನಲ್ಲಿ ಜರುಗಿದ CITU ಉಳ್ಳಾಲ ವಲಯ ಸಮ್ಮೇಳನವನ್ನು ಉದ್ಘಾಟಿಸುತ್ತಾ ಈ ಮಾತುಗಳನ್ನು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ಕಾರ್ಮಿಕ ನಾಯಕರಾದ ಸುಕುಮಾರ್ ರವರು, *ಇಂದು ಕಾರ್ಪೊರೇಟ್ ಹಿಂದುತ್ವದ ಕೂಟ ದೇಶವನ್ನು ಆಳುತ್ತಿದ್ದು ದೇಶದ ಸ್ವಾತಂತ್ರ್ಯ, ಸಮಗ್ರತೆ,ಸಾರ್ವಭೌಮತ್ವವನ್ನು ನಾಶ ಮಾಡುತ್ತಿದೆ.ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತವನ್ನು ಜಾತಿ ಧರ್ಮದ ಆಧಾರದಲ್ಲಿ ಮತ್ತೆ ವಿಭಜಿಸಲು ಹುನ್ನಾರ ನಡೆಸುತ್ತಿದೆ. ಕಾರ್ಮಿಕ ವರ್ಗದ ಹಕ್ಕು ಭಾಧ್ಯತೆಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ದೂಡುತ್ತಿದೆ* ಎಂದು ಹೇಳಿದರು.
ಸಮ್ಮೇಳನಕ್ಕೆ ಮಾರ್ಗದರ್ಶನ ನೀಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, *ಐಕ್ಯತೆ ಮತ್ತು ಹೋರಾಟದ ನಿನಾದದೊಂದಿಗೆ ಜನ್ಮ ತಾಳಿದ CITU ವಿವಿಧ ವಿಭಾಗದ ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ದೇಶದ ಬಲಿಷ್ಠ ಕಾರ್ಮಿಕ ಸಂಘಟನೆಯಾಗಿ ಮೂಡಿ ಬಂದಿದೆ.ಕಾರ್ಮಿಕ ವರ್ಗದ ಮಧ್ಯೆ ಐಕ್ಯತೆ ಸಾಧಿಸಿ ಚಳುವಳಿಯನ್ನು ವಿಸ್ತರಿಸಿ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಕಾರ್ಮಿಕ ವರ್ಗಕ್ಕೆ ಮಾತ್ರ ಸಾಧ್ಯ* ಎಂದು ಹೇಳಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಕ್ರಷ್ಣಪ್ಪ ಸಾಲ್ಯಾನ್ ರವರು ಸಮ್ಮೇಳನಕ್ಕೆ ಶುಭಕೋರಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು CITU ಉಳ್ಳಾಲ ವಲಯಾಧ್ಯಕ್ಷರಾದ ಪದ್ಮಾವತಿ ಶೆಟ್ಟಿಯವರು ವಹಿಸಿದ್ದರು.ಬಳಿಕ ನಡೆದ ಪ್ರತಿನಿಧಿ ಅಧಿವೇಶನದಲ್ಲಿ CITU ಉಳ್ಳಾಲ ವಲಯ ಪ್ರಧಾನ ಕಾರ್ಯದರ್ಶಿ ಜಯಂತ ನಾಯಕ್ ರವರು ಕರಡು ವರದಿ ಮಂಡಿಸಿದರು. ಸಮ್ಮೇಳನದ ಸಮಾರೋಪ ಭಾಷಣವನ್ನು ಜಿಲ್ಲೆಯ ಹಿರಿಯ ಕಾರ್ಮಿಕ ನಾಯಕರಾದ ಯು.ಬಿ.ಲೋಕಯ್ಯರವರು ಮಾಡಿದರು.
ಸಮ್ಮೇಳನವು ನೂತನ ವಲಯ ಸಮಿತಿಯನ್ನು ರಚಿಸಿತು. ನೂತನ ಅಧ್ಯಕ್ಷರಾಗಿ ಸುಂದರ ಕುಂಪಲ,ಪ್ರಧಾನ ಕಾರ್ಯದರ್ಶಿಯಾಗಿ ರೋಹಿದಾಸ್ ಭಟ್ನಗರ, ಖಜಾಂಚಿಯಾಗಿ ವಿಲಾಸಿನಿ ತೊಕ್ಕೋಟುರವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಪದ್ಮಾವತಿ ಶೆಟ್ಟಿ,ರಾಮಚಂದ್ರ ಪಜೀರು,ಜನಾರ್ಧನ ಕುತ್ತಾರ್, ಜಯಂತ ನಾಯಕ್, ಕಾರ್ಯದರ್ಶಿಗಳಾಗಿ ಅಶೋಕ ಶೆಟ್ಟಿ,ಚಂದ್ರಹಾಸ ಪಿಲಾರ್, ಬಾಬು ಪಿಲಾರ್, ರತ್ನಮಾಲಾ ಉಚ್ಚಿಲರವರನ್ನು ಆರಿಸಲಾಯಿತು.
Sneha Gowda

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

7 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

22 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

43 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

1 hour ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

2 hours ago