ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಲ್ಲಗುಡ್ಡೆ, ಅಗರಿ ಎಂಬಲ್ಲಿ ಅರಣ್ಯ ಇಲಾಖೆಯ ನೆಡುತೋಪಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದ್ದು, ಇಲಾಖೆ ಹಾಗೂ ಸ್ಥಳೀಯರ ಸಕಾಲಿಕ ನೆರವಿನಿಂದ ಹೆಚ್ಚಿನ ಹಾನಿ ಉಂಟಾಗುವುದು ತಪ್ಪಿದೆ.
ಇಲ್ಲಿನ ನೆಡುತೋಪಿನಲ್ಲಿ ಅಕೇಶಿಯಾ ಮರಗಳನ್ನು ಕಡಿಯಲಾಗಿದ್ದು ದಾಸ್ತಾನು ಇಡಲಾಗಿತ್ತು. ಯಾರೋ ದಾರಿಹೋಕರು ಬೀಡಿ ಅಥವಾ ಸಿಗರೇಟು ಸೇದಿ ಎಸೆದ ಪರಿಣಾಮ ಬೆಂಕಿ ಉಂಟಾಗಿದೆ.
ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ್ ಹಾಗೂ ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತಂದು ಹೆಚ್ಚಿನ ಹಾನಿ ಉಂಟಾಗದಂತೆ ಕ್ರಮ ಕೈಗೊಂಡರು.