News Karnataka Kannada
Sunday, April 28 2024
ಮಂಗಳೂರು

ದಕ್ಷಿಣಕನ್ನಡ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಹಿಂದೂ ಜಾಗರಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ದೂರು

Karinjeshwara Temple
Photo Credit :

ಬಂಟ್ವಾಳ : ಶ್ರೀಕ್ಷೇತ್ರ ಕಾರಿಂಜದಲ್ಲಿ ಇತ್ತೀಚೆಗೆ ನಡೆದ  ಪ್ರತಿಭಟನಾ ಸಭೆಯಲ್ಲಿ ದಕ್ಷಿಣಕನ್ನಡ  ಜಿಲ್ಲಾಧಿಕಾರಿಯ ವಿರುದ್ಧ  ಅವಹೇಳನಕಾರಿ ಮಾತುಗಳನ್ನಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆ ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾರಂತ್ ವಿರುದ್ಧ  ಸ್ವತಃ ಜಿಲ್ಲಾಧಿಕಾರಿಯೇ ದೂರು ನೀಡಿದ್ದು, ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಈ ದೂರು ನೀಡಿದ್ದು, ಐಪಿಸಿ ಸೆಕ್ಷನ್ 153,117, 504, 506, 189 ರ ಅನ್ವಯ ಪ್ರಕರಣ ದಾಖಲಾಗಿದೆ. ಕಾರಿಂಜೇಶ್ವರ ಕ್ಷೇತ್ರದ ಸುತ್ತಮುತ್ತ ನಡೆಯುವ ಅಕ್ರಮ ಗಣಿಗಾರಿಕೆ ನಿಲ್ಲಿಸುವಂತೆ ಒತ್ತಾಯಿಸಿ ಕಾರಿಂಜದಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ವತಿಯಿಂದ ನಡೆದ ರುದ್ರಗಿರಿ ರಣಕಹಳೆ ಎಂಬ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಜಗದೀಶ್ ಕಾರಂತ್, ಬಂಟ್ವಾಳ ತಾಲೂಕಿನ ಕಾರೀಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21 ಕ್ಕೆ ಎಲ್ಲರೂ ಸಿದ್ದರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ. ಇಲ್ಲವಾದರೇ ಟ್ರಾನ್ಸ್‌ ಫರ್ ತೆಗೆದುಕೊಂಡು ಹೋಗೋ. ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು  ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪಾರಾಧಕ್ಕೆ ದುಷ್ಪ್ರೇರಣೆ ನೀಡಿರುತ್ತಾರೆ.

ಜಗದೀಶ್ ಕಾರಂತ್‌ ರವರು ಅಪರಾಧ ಕೃತ್ಯವನ್ನು ಎಸಗುವ ಮನೋ ಧೋರಣೆ  ಹೊಂದಿ ಪ್ರಚೋದಾನಾಧಿಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಹಾಗೂ ಅಪರಾಧ ಕೃತ್ಯ ನಡೆಸಲು ಪ್ರೇರಣೆಯನ್ನು ಮತ್ತು ಬೆದರಿಕೆಯನ್ನೊಡ್ಡಿದ್ದು, ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಛೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು  ಪ್ರಚೋದಿಸಿ  ಬೆದರಿಕೆ ಹಾಕಿರುವುದಾಗಿ ‌ಜಿಲ್ಲಾಧಿಕಾರಿಯವರು ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಪ್ರಕರಣ ದಾಖಲಿಸಿದ್ದು,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮಾರ್ಗದರ್ಶನದಂತೆ ಮುಂದಿನ ಕ್ರಮ ಕೈಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು