ಮಂಗಳೂರು: ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಅವರ ಮಾರ್ಗದರ್ಶನದಂತೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಆರೋಗ್ಯ ಇಲಾಖೆ, ಕೆಎಸ್ಸಾರ್ಟಿಸಿ, ಮೆಸ್ಕಾಂ, ಪಿಡಬ್ಲ್ಯುಡಿ, ಆರ್ಟಿಓ, ಮಹಾ ನಗರ ಪಾಲಿಕೆ ಕಚೇರಿ ಸೇರಿದಂತೆ ನಾನಾ ಕಚೇರಿಗಳ ಸುತ್ತಮುತ್ತ ಸ್ವಚ್ಛತಾ, ಲಾರ್ವ ತೆರವು ಕಾರ್ಯಾಚರಣೆ ನಡೆಸಲಾಗಿದೆ. ವಾರಕ್ಕೊಮ್ಮೆ ಈ ರೀತಿಯ ಅಭಿಯಾನ ನಡೆಯಬೇಕು ಮಾತ್ರವಲ್ಲದೆ ಮನೆ, ವಸತಿ ಸಮುಚ್ಚಯದಲ್ಲಿ ಈ ರೀತಿ ಡ್ರೈವ್ ನಡೆದರೆ ಡೆಂಗ್ಯೂ, ಮಲೇರಿಯಾ ನಿಯಂತ್ರಣ ಸಾಧ್ಯವಿದೆ.
ಮಂಗಳೂರು, ಸುಳ್ಯ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿಯಲ್ಲಿ ಮಳೆಯಾಗಿದೆ. ಕಳೆದ ಎರಡು ವರ್ಷಗಳಿಂದ ಪುತ್ತೂರು, ಬೆಳ್ತಂಗಡಿಯ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ಡೆಂಗ್ಯೂ, ಈ ಬಾರಿ ಮಂಗಳೂರು ನಗರದಲ್ಲೂ ಪತ್ತೆಯಾಗುತ್ತಿದೆ. ಮಳೆ ಬಂದು ನಿಂತರೆ ಮನೆ ತಾರಸಿ, ತೆಂಗು, ಕಂಗು, ರಬ್ಬರ್ ತೋಟಗಳಲ್ಲಿ ಶೇಖರಣೆಯಾಗುತ್ತಿರುವ ನೀರು, ಲಾರ್ವ ಉತ್ಪತ್ತಿಗೆ ಕಾರಣವಾಗುತ್ತಿವೆ. ಈ ಲಾರ್ವ ಸೊಳ್ಳೆಯಾಗಿ ಪರಿವರ್ತನೆಗೊಂಡು ಮನುಷ್ಯನಿಗೆ ಚುಚ್ಚಿದಾಗ ಡೆಂಗ್ಯೂ ವೈರಸ್ ಬರುವ ಸಾಧ್ಯತೆಯಿದ್ದು, ಇದು ಸಾಂಕ್ರಾಮಿಕ ರೋಗವಾಗಿದೆ. ಈ ಬಗ್ಗೆ ಕಚೇರಿ, ಮನೆ ಮನೆಗಳಲ್ಲಿ, ಸಾರ್ವಜನಿಕವಾಗಿ ಜಾಗೃತಿ ಹುಟ್ಟಿಸಬೇಕಾಗಿದೆ.
ಮಂಗಳೂರು ನಗರದಲ್ಲೂ ಅಧಿಕ ಪ್ರಕರಣ:
2019ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂಗೆ 850ಕ್ಕೂ ಅಧಿಕ ಮಂದಿ ಪೀಡಿತರಾಗಿ, ಒಟ್ಟು 13 ಮಂದಿ ಮೃತಪಟ್ಟಿದ್ದರು. 2020 ಮತ್ತು 2021ರಲ್ಲಿ ಈ ಪ್ರಕರಣ ಇಳಿಕೆಯಾಗಿತ್ತು. ಆದರೆ ಈ ಬಾರಿ ಮತ್ತೆ ನಗರ ಭಾಗದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿದೆ. ಜನವರಿಯಿಂದ ಈವರೆಗೆ ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 23 ಡೆಂಗ್ಯೂ, ಮಲೇರಿಯಾ 43 ಪ್ರಕರಣಗಳು ಪತ್ತೆಯಾಗಿವೆ.
ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್…
ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…
ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…
ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.
ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…
ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…