Categories: ಮಂಗಳೂರು

ದಿ| ಪ್ರಸಾದ ಬಲಿಪರ ನುಡಿನಮನದಲ್ಲಿ ಬಾವುಕರಾದ ಪಟ್ಲ ಸತೀಶ್ ಶೆಟ್ಟಿ.

“ದೇವರೇ, ಯಕ್ಷರಂಗಕ್ಕೆ ಯಾಕೆ ಈ ರೀತಿಯ ಶಿಕ್ಷೆ”

ಮಂಗಳೂರು: ಯಕ್ಷಗಾನ ಕ್ಷೇತ್ರವು ಈ ಮಟ್ಟಕ್ಕೆ ವಿಜೃಂಭಿಸಲು ಕಾರಣ ಬಲಿಪ ಪರಂಪರೆಯ ಹಾಡುಗಳು. ಇಂದಿನ ಯುವ ಜನಾಂಗವನ್ನು ಯಕ್ಷಗಾನದ ಸಾಂಪ್ರದಾಯಿಕ ಹಾಡುಗಳಿಂದಲೇ ಆಕರ್ಷಿಸಿದವರು ಯುವ ಭಾಗವತರಾದ ಪ್ರಸಾದ ಬಲಿಪರು.

ಇವರ ಅಗಲುವಿಕೆ ಯಕ್ಷಗಾನ ರಂಗಕ್ಕೆ ತುಂಬಲಾರದ ನಷ್ಟ. ಅಣ್ಣ ತಮ್ಮಂದಿರಂತೆ ಇದ್ದ ನಮ್ಮ ಒಡನಾಟ ಆ ದೇವರಿಗೆ ಸಹಿಸಿಕೊಳ್ಳಲು ಅಸಾಧ್ಯವಾಯಿತೇ ಎಂದು ತನ್ನ ಮನದಾಳದ ದು:ಖವನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಬಲ್ಲಾಲ್ ಭಾಗ್ ಪತ್ತುಮುಡಿ ಸೌಧದ ಸಭಾಂಗಣದಲ್ಲಿ  ಹಮ್ಮಿಕೊಂಡ ಶೃದ್ಧಾಂಜಲಿ ಸಭೆಯಲ್ಲಿ ಪಟ್ಲ ಸತೀಶ್ ಶೆಟ್ಟಿಯವರು ಹೇಳಿದರು.

ಯಕ್ಷಗಾನದಲ್ಲಿ ಹಾಡುಗಾರಿಕೆಗೆ ಎಷ್ಟೋ ಮಂದಿ ಇದ್ದಾರೆ. ಆದರೆ ಭಾಗವತಿಕೆಯ ತಿಳುವಳಿಕೆ ಇರುವವರು ತುಂಬಾ ಕಡಿಮೆ. ಅಂತಹ ಭಾಗವತರಲ್ಲಿ ಪ್ರಸಾದ್ ಬಲಿಪರು ಶ್ರೇಷ್ಠ ಭಾಗವತರು. ಅವರ ಖಾಯಿಲೆಯ ಸೂಕ್ಷಮತೆಯು ೪ ವರ್ಷದ ಹಿಂದೆಯೇ ಗೊತ್ತಾಗುತ್ತಿದ್ದರೆ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿತ್ತೋ ಏನೊ ಎಂಬುದಾಗಿ ಪಟ್ಲ ಸತೀಶ್ ಶೆಟ್ಟಿ ನುಡಿದರು.

ಈ ಸಂದರ್ಭದಲ್ಲಿ ಬಲಿಪರಿಂದ ತನ್ನ ಪಾಲಿಗೆ ಬಂದ ಸೌಭಾಗ್ಯ ಮತ್ತು ದೌರ್ಭಾಗ್ಯವನ್ನು ಪಟ್ಲ  ನೆನಪಿಸಿಕೊಂಡರು. ಸೌಭಾಗ್ಯವೆಂದರೆ ಇಬ್ಬರೂ ಬಲಿಪರನ್ನು ಪ್ರಥಮವಾಗಿ ವಿಮಾನ ಹತ್ತಿಸಿ, ದುಬೈಗೆ ಪ್ರಯಾಣ ಮಾಡಿರುವುದು.

ದೌರ್ಭಾಗ್ಯವೆಂದರೆ ಬಲಿಪರ ನಿಧನ ವಾರ್ತೆ ತಿಳಿದ ತಕ್ಷಣ ತೀವ್ರ ವಿಷಾದದಿಂದ ರಂಗಸ್ಥಳದಲ್ಲಿ ಯಕ್ಷಗಾನವನ್ನು ಮೊಟಕುಗೊಳಿಸಿ ಮೌನ ಪ್ರಾರ್ಥನೆ ಸಲ್ಲಿಸಿದ ಸಂದರ್ಭ. ಎಂಬುದಾಗಿ ಹೇಳಿ ಸಂತಾಪದ ನುಡಿನಮನವನ್ನು ಸಲ್ಲಿಸಿದರು.

ಯಕ್ಷಗಾನ ಕಲೆಯ ವಿದ್ವಾಂಸರು,  ವಿಮರ್ಶಕರು ಆದ ಫ್ರೋ.ಡಾ! ಪ್ರಭಾಕರ ಜೋಷಿಯವರು,   ಯಕ್ಷಗಾನ ಕ್ಷೇತ್ರವನ್ನು ನಿಂತ ನೀರಾಗಲು ಬಿಡದೆ ಹರಿವ ನದಿಯಂತೆ ಮುನ್ನಡೆಸುವ ಕಾರ್ಯವನ್ನು ನಡೆಸಿದ ಕೀರ್ತಿ ಬಲಿಪ ಕುಟುಂಬಕ್ಕೆ ಸಲ್ಲುತ್ತದೆ. ಬಲಿಪ ಕುಟುಂಬ ಯಕ್ಷಗಾನದಿಂದ ಎಷ್ಟು ಶ್ರೀಮಂತಿಕೆಯನ್ನು ಪಡೆದಿದ್ದಾರೋ , ಅವರ ಮನೆಯ ಆರ್ಥಿಕ ಪರಿಸ್ಥಿತಿಯು ಅಷ್ಟೇ ಬಡತನದಿಂದ ಕೂಡಿದೆ. ಈಗಾಗಲೇ ಪ್ರಸಾದ ಬಲಿಪರ ಆರೋಗ್ಯ ಚಿಕಿತ್ಸೆಗೆ ಪಟ್ಲ ಟ್ರಸ್ಟ್ ಸ್ಪಂದಿಸಿದ್ದು, ಮನೆಯವರು ಅಪೇಕ್ಷಿಸಿದಲ್ಲಿ ಸಹಾಯ ಸಹಕಾರ ನೀಡಲು ಫೌಂಡೇಶನ್ ಸದಾ ಸಿದ್ಧವಿದೆ ಎಂದರು.

ಪ್ರೋಫೆಸರ್ ಭಾಸ್ಕರ್ ರೈ ಕುಕ್ಕುವಳ್ಳಿ , ಯಕ್ಷಗಾನ ಕ್ಷೇತ್ರಕ್ಕೆ ಬಲಿಪ ಕುಟುಂಬದ ಕೊಡುಗೆ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂತಾಪ ಸಲ್ಲಿಸಿದರು.

ಸಭೆಗೆ ಆಗಮಿಸಿದ ಸಭಿಕರಲ್ಲಿ ಯಕ್ಷಗಾನ ಕಲಾವಿದರಾದ ದಿವಾಣ ಶಿವಶಂಕರ ಭಟ್ , ಹವ್ಯಾಸಿ ಭಾಗವತರಾದ ಸುಧಾಕರ್ ಸಾಲ್ಯಾನ್, ಹಿರಿಯ ಕಲಾವಿದ ಸಂಜಯ್ ಕುಮಾರ್ ಗೋಣಿಬೀಡು, ಭರತನಾಟ್ಯ ವಿದುಷಿ ಶ್ರೀಮತಿ ಸುಮಂಗಲ ರತ್ನಾಕರ್ , ಪ್ರಸಾದ ಬಲಿಪರ ಗುಣಗಾನದೊಂದಿಗೆ ನುಡಿನಮನಗಳನ್ನು ಸಲ್ಲಿಸಿದರು.

ವೇದಿಕೆಯಲ್ಲಿ ಬಹರೈನ್ ಘಟಕದ ಪ್ರಮುಖರಾದ ರಮೇಶ್ ಮಂಜೇಶ್ವರ, ಮಹಿಳಾ ಘಟಕದ ಗೌರವಾಧ್ಯಕ್ಷರಾದ ಶ್ರೀಮತಿ ಆರತಿ ಆಳ್ವ, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್  ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

ಹಾಜರಿದ್ದ ಸದಸ್ಯರೆಲ್ಲರೂ ಒಂದು ನಿಮಿಷದ  ಮೌನ ಪ್ರಾರ್ಥನೆಯೊಂದಿಗೆ ಪ್ರಸಾದ ಬಲಿಪರ ಭಾವಚಿತ್ರಕ್ಕೆ ಪುಷ್ಪನಮನ ಮಾಡಿದರು.

Sneha Gowda

Recent Posts

ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ವಿಶ್ವ ಶುಶ್ರೂಷಕರ ದಿನಾಚರಣೆ

ಇಲ್ಲಿನ ಬ್ರಿಮ್ಸ್ ಆವರಣದಲ್ಲಿರುವ ಬ್ರಿಮ್ಸ್ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ವಿಶ್ವ ಶುಶ್ರೂಷಕರ ದಿನ ಆಚರಿಸಲಾಯಿತು.

7 hours ago

ಮುಂಬೈನಲ್ಲಿ ಹೋರ್ಡಿಂಗ್ ಬಿದ್ದು ಮೂವರು ಸಾವು: 59 ಜನರಿಗೆ ಗಾಯ

ಮುಂಬೈನಲ್ಲಿ ಈ ವರ್ಷದ ಮೊದಲ ಮಳೆಗೆ ಅನಾಹುತ ಸಂಭವಿಸಿದೆ. ಇಂದು ಸಂಜೆ 4.30ರ ಸುಮಾರಿಗೆ ಹೋರ್ಡಿಂಗ್ ಕುಸಿದಿದ್ದರಿಂದ ಸುಮಾರು 100…

7 hours ago

ಸಚಿವ ಹೆಚ್‌.ಡಿ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

8 hours ago

ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್

ಇ- ಲಾಸ್ಟ್ ಮತ್ತು ಸಿಇಐಆರ್- ಫೋರ್ಟಲ್ ಮೂಲಕ ಕಳೆದು ಹೋಗಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ 52 ಮೊಬೈಲ್‌ಗಳನ್ನು…

8 hours ago

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಅಂಬಿಕಾ ವಿದ್ಯಾಲಯದ ಸಾಧನೆ: ನೂರು ಶೇಕಡಾ ಫಲಿತಾಂಶ

ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು 2023 – 24ನೇ ಸಾಲಿನ…

8 hours ago

ನಾಡ ಜನರ ಬದುಕು ನಂದಾದೀಪವಾಗಲು ನಂದಿ ಬಸವೇಶ್ವರ ತೊಟ್ಟಿಲು ತೂಗಿದ ಗಡಿನಾಡ ನಾರಿಯರು

ಕರ್ನಾಟಕದ ಕಟ್ಟಕಡೆಯ ಗ್ರಾಮವಾದ ಗಡಿನಾಡ ಗ್ರಾಮ ಬಳೂರ್ಗಿ ಗ್ರಾಮ ದೇವ ನಂದಿ ಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.…

9 hours ago