ಮಂಗಳೂರು

ದೇಶ ಕಂಡ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿದ ಜ್ಯೋತಿ ಬಸು ನಾಯಕತ್ವ ಇಡೀ ದೇಶಕ್ಕೆ ಮಾದರಿ – ಸುಕುಮಾರ್

ಮಂಗಳೂರು : ಬಂಗಾಳದ ಅಗರ್ಭ ಶ್ರೀಮಂತ ಕುಟುಂಬದಲ್ಲಿ ಹುಟ್ಟಿ ಬೆಳೆದ ಜ್ಯೋತಿಬಸು ತನ್ನ ಜೀವಿತದ ಕೊನೆಯ ಉಸಿರು ಇರುವವರೆಗೂ ಸಮಾಜದ ಶೋಷಿತ ಸಮುದಾಯಗಳ ಏಳಿಗೆಗಾಗಿ ಶ್ರಮಿಸಿದವರು.
ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿದ ಜ್ಯೋತಿ ಬಸು ವಾಪಾಸ್ ತಾಯ್ನಾಡಿಗೆ ಕಮ್ಯುನಿಸ್ಟ್‌ರಾಗಿ ಬಂದು ಬಂಗಾಳದ ರೈತ ಕಾರ್ಮಿಕರ ಆಶಾಕಿರಣವಾಗಿ ಹೊರಹೊಮ್ಮಿದರು.
ತನ್ನ ಯೌವನದಲ್ಲೇ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವ ಮೂಲಕ ಬಂಗಾಳದ ವಿದಾನಸಭೆಯಲ್ಲಿ ದುಡಿಯುವ ವರ್ಗದ ಧ್ವನಿಯಾಗಿ ಮೂಡಿದರು. ತಾನು ಸ್ಪರ್ಧಿಸಿದ ಎಲ್ಲಾ ಚುನಾವಣೆಗಳಲ್ಲೂ ಜಯ ಗಳಿಸುವ ಮೂಲಕ ಸೋಲಿಲ್ಲದ ಸರದಾರನೆಂಬ ಖ್ಯಾತಿ ಗಳಿಸಿದ್ದರು.
24 ವರ್ಷಗಳ ಕಾಲ ಬಂಗಾಳದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಡೆಸಿದ ಅರೆ ಫ್ಯಾಸಿಸ್ಟ್ ದಬ್ಬಾಳಿಕೆಯನ್ನು, ತೀವ್ರಗೊಂಡಿದ್ದ ನಕ್ಸಲ್ ಹಾವಳಿಯನ್ನು, ಗೂರ್ಖಾ ಲ್ಯಾಂಡ್‌ನ ಪ್ರತ್ಯೇಕತಾವಾದಿ ಚಳುವಳಿಯನ್ನು ಸಮರ್ಥವಾಗಿ ಎದುರಿಸಿ ಶಮನ ಮಾಡುವಲ್ಲಿ ಜ್ಯೋತಿಬಸು ಪಾತ್ರ ಸ್ಮರಣೀಯವಾದದ್ದು.
ಇಂದಿರಾಗಾಂಧಿ ಹತ್ಯೆಗೆ ಪ್ರತಿಯಾಗಿ ಸಿಖ್ಖರ ಮೇಲಿನ ಧಾಳಿ ಹಾಗೂ ಬಾಬ್ರಿ ಮಸೀದಿ ಧ್ವಂಸದಿಂದಾಗಿ ದೇಶದೆಲ್ಲೆಡೆ ಭುಗಿಲೆದ್ದ ಹಿಂಸಾಚಾರಗಳು ಪಶ್ಚಿಮ ಬಂಗಾಳದಲ್ಲಿ ಒಂದೇ ಒಂದು ಗಲಭೆ ನಡೆಯದಂತೆ ಮುತುವರ್ಜಿ ವಹಿಸಿದ ಜ್ಯೋತಿಬಸುರವರ ಪಾತ್ರ ನಿಜಕ್ಕೂ ಶ್ಲಾಘನೀಯ.
ಹೀಗೆ ದೇಶ ಕಂಡ ಪ್ರತಿಯೊಂದು ಸಂಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿದ ಜ್ಯೋತಿಬಸುರವರ ದೂರದೃಷ್ಟಿಕೋನದ ನಾಯಕತ್ವ ನಿಜಕ್ಕೂ ದೇಶಕ್ಕೆ ಮಾದರಿ ಎಂದು CPIM ದ.ಕ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ರವರು ಅಭಿಪ್ರಾಯ ಪಟ್ಟರು.
ಅವರು ಮಂಗಳೂರಿನ ವಿಕಾಸ ಕಚೇರಿಯಲ್ಲಿ ಜರುಗಿದ ಜ್ಯೋತಿಬಸುರವರ 12ನೇ ಸಂಸ್ಮರಣಾ ದಿನಾಚರಣೆಯ ಅಂಗವಾಗಿ ಬಂಗಾಳದ ಕೆಂಪು ಸೂರ್ಯ ಒಂದು ನೆನಪು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಈ ಮಾತುಗಳನ್ನು ಹೇಳಿದರು_ .
CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ ಯವರು ಮಾತನಾಡಿ, ಮುಖ್ಯಮಂತ್ರಿಯಾದ ಪ್ರಾರಂಭದಲ್ಲೇ ಭೂಹೀನರಿಗೆ ಭೂಮಿ ಹಂಚಿಕೆ, ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆಗಳನ್ನು ಸಮರ್ಪಕ ಜಾರಿಗೊಳಿಸಿದ ಕೀರ್ತಿ ಜ್ಯೋತಿಬಸುರವರಿಗೆ ಸಲ್ಲುತ್ತದೆ.
ಶಿಕ್ಷಣ, ಆರೋಗ್ಯ, ಕೃಷಿರಂಗಗಳಿಗೆ ಪ್ರಮುಖ ಆದ್ಯತೆ ನೀಡಿ ಇಡೀ ದೇಶದಲ್ಲಿ ಮಾದರಿ ಆಡಳಿತ ನಡೆಸಿದ ಜ್ಯೋತಿಬಸುರವರು ಕೋಮುವಾದದ ವಿರುದ್ದ ಧ್ರಢವಾಗಿ ನಿಂತು ಪಶ್ಚಿಮ ಬಂಗಾಳದಲ್ಲಿ ಸೌಹಾರ್ದತೆಯನ್ನು ಸಾಕಾರಗೊಳಿಸಿದ್ದರು ಹಾಗೂ ಪ್ರಧಾನಿ ಪಟ್ಟವೇ ತನ್ನ ಬಳಿ ಬಂದಿದ್ದರೂ ಅದನ್ನು ನಯವಾಗಿ ತಿರಸ್ಕರಿಸಿದ್ದರು ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಬ್ಯಾಂಕ್ ನೌಕರರ ಸಂಘಟನೆಯ ಮುಖಂಡರಾದ ಬಿ.ಎಂ. ಮಾಧವರವರು ವಹಿಸಿದ್ದರು. ಪ್ರಾರಂಭದಲ್ಲಿ ಸುನಿಲ್ ಕುಮಾರ್ ಬಜಾಲ್ ರವರು ಸ್ವಾಗತಿಸಿದರೆ, ಕೊನೆಯಲ್ಲಿ ಸಂತೋಷ್ ಬಜಾಲ್ ರವರು ವಂದಿಸಿದರು.
Sneha Gowda

Recent Posts

ಬಂಟ್ವಾಳ ಜಮೀಯ್ಯತುಲ್ ಫಲಾಹ್, ರೋಟರಿ ಕ್ಲಬ್ ನಿಂದ “ಮೆಹ್’ಫಿಲೇ ಈದ್”

 ಜಮೀಯ್ಯತುಲ್ ಫಲಾಹ್ ಬಂಟ್ವಾಳ ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್'ಫಿಲೇ…

7 mins ago

ಸಂಧಿವಾತದ ಸಮಸ್ಯೆಗೆ ಬಿಸಿನೀರ ಬಳಕೆ ಒಳ್ಳೆಯದು!

ಕೈಕಾಲು ಎಳೆತದಂತಹ ಕಾಯಿಲೆ ಅರ್ಥಾತ್ ಸಂಧಿವಾತ ಹೆಚ್ಚು ನೀರಲ್ಲಿ ಕೆಲಸ ಮಾಡುವವರನ್ನು ಇಲ್ಲಿಲ್ಲದಂತೆ ಕಾಡುತ್ತದೆ. ಅದರಲ್ಲೂ ಶೀತ ಪ್ರದೇಶದಲ್ಲಿ ಕೆಲಸ…

21 mins ago

ಇನ್‌ಸ್ಟಾ ಲೈವ್‌ಗೋಸ್ಕರ ಕಾರಿನ ಸ್ಪೀಡ್‌ ಹೆಚ್ಚಿಸಿದ ಸ್ನೇಹಿತ : ನಾಲ್ವರ ದುರ್ಮರಣ

ಇನ್‌ಸ್ಟಾಗ್ರಾಮ್‌ ಲೈವ್‌ ಮಾಡವುದಕ್ಕಾಗಿ ಸ್ನೇಹಿತ ಕಾರಿನ ವೇಗವನ್ನು ಹೆಚ್ಚಿಸಿದ್ದು ನಂತರ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದಿದ್ದು ನಾಲ್ವರು ಸಾವನಪ್ಪಿದ್ದು…

26 mins ago

ಮಳೆಗಾಗಿ ಕತ್ತೆಗೆ ಮದುವೆ ಮಾಡಿದ ಗ್ರಾಮಸ್ಥರು

ಮಳೆ  ಇಲ್ಲದೆ ಬರ ಪರಿಸ್ಥಿರಿ ಎದುರಾಗಿದ್ದು,  ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಎಲ್ಲ ಸೇರಿಕೊಂಡು ಕತ್ತೆಗಳಿಗೆ ಮದುವೆ ಮಾಡಿ ವರುಣರಾಯನಿಗಾಗಿ ಪ್ರಾರ್ಥಿಸಿದ…

33 mins ago

ಜುಲೈ ಅಂತ್ಯದ ವೇಳೆಗೆ ನಾಗಸಂದ್ರ, ಮಾದಾವರದ ನಡುವೆ ಮೆಟ್ರೋ ಆರಂಭ

ಪಂಚವಾರ್ಷಿಕ ಯೋಜನೆಯಾಗಿ ಉಳಿದಿದ್ದ ನಮ್ಮ ಮೆಟ್ರೋ ಹಸಿರು ಕಾರಿಡಾರ್​ನ ನಾಗಸಂದ್ರ ಹಾಗೂ ಮಾದಾವರದ ನಡುವಿನ 3.7 ಕಿಮೀ ಮಾರ್ಗ  ಜುಲೈ…

44 mins ago

ವೃದ್ಧನ ಅನ್ನನಾಳದಲ್ಲಿ ಸಿಲುಕಿದ್ದ ಮಟನ್ ಮೂಳೆಯನ್ನು ಹೊರತೆಗೆದ ವೈದ್ಯರು

ಎಲ್‌ಬಿ ನಗರದ ಕಾಮಿನೇನಿ ಆಸ್ಪತ್ರೆಯ ವೈದ್ಯರು 66 ವರ್ಷದ ರೋಗಿಯ ಹೃದಯದ ಬಳಿ ಅನ್ನನಾಳದಲ್ಲಿ ಸಿಲುಕಿದ್ದ ಮಟನ್ ಮೂಳೆಯನ್ನು ಯಶಸ್ವಿಯಾಗಿ…

54 mins ago