Categories: ಮಂಗಳೂರು

ದೋಣಿ ಮುಳುಗಡೆಯಾಗಿ ಮೃತರಾದ ಮೀನುಗಾರರ ಕುಟುಂಬದವರಿಗೆ 6 ಲಕ್ಷ ಪರಿಹಾರ : ಸಚಿವ ಎಸ್. ಅಂಗಾರ

ಮಂಗಳೂರು : ಪ್ರಕೃತಿ ವಿಕೋಪದಿಂದ ದೋಣಿ ಮುಳುಗಡೆಯಾಗಿ ಮೃತರಾದ ಮೀನುಗಾರರ ಕುಟುಂಬದವರಿಗೆ 6 ಲಕ್ಷ ಪರಿಹಾರ ನೀಡಲಾಗುವುದು ಎಂದು ಮೀನುಗಾರಿಕೆ, ಬಂದರು ಮುತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದರು.

ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್ ಪ್ರಶ್ನೆಗೆ ಉತ್ತರಿಸಿ ಸಚಿವರು, ಮೀನುಗಾರರಿಗಾಗಿ ಕೇಂದ್ರ, ರಾಜ್ಯಗಳಿಂದ 12 ಯೋಜನೆ, ಜಿಲ್ಲಾ ಪಂಚಾಯತ್‌ಯಿಂದ 4 ಯೋಜನೆ ಜಾರಿಯಲ್ಲಿವೆ. ವಿವಿಧ ಯೋಜನೆ ಮೂಲಕ ಸರ್ಕಾರ ಮೀನುಗಾರರ ಅಭಿವೃದ್ಧಿಗೊಳಿಸಲಾಗುತ್ತಿದೆ.

ಸಂಕಷ್ಟ ಪರಿಹಾರ ನಿಧಿಯಿಂದ ಅನೇಕ ಸೌಲಭ್ಯ ನೀಡಲಾಗುತ್ತಿದೆ. ಅವರ ಸಮಸ್ಯೆಗಳಿಗೆ ಪರಿಹಾರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕ್ ಖಾತೆ ಸಮಸ್ಯೆ, ತಾಂತ್ರಿಕ ತೊಂದರೆ ಯಾಗಿರುವುದರಿಂದ 1200 ಮೀನುಗಾರರ ಸಾಲ ಮನ್ನಾ ಬಾಕಿ ಇವೆ. ಈ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಅಭಿವೃದ್ಧಿಗೆ 12.99 ಕೋಟಿ ರೂ.

ಬಿಜೆಪಿಯ ಎಸ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿ ಸಚಿವರು, ರಾಜ್ಯದ ಮೀನುಗಾರಿಕೆ ಇಲಾಖೆಯಿಂದ ಮೀನುಗಾರರಿಗೆ ಬಂದರಿನಲ್ಲಿ ದೋಣಿಗಳಿಗೆ ಲಂಗರು ಹಾಕುವುದು. ಮೀನುಗಾರಿಕೆ ಬಂದರಿನ ಅಭಿವೃದ್ಧಿಗಾಗಿ 2021-22ರ ಅಗಸ್ಟ್‌ವರೆಗೆ 12.99 ಕೋಟಿ ರೂ. ನೀಡಲಾಗಿದೆ. ಕರ್ನಾಟಕ ಮತ್ಸ್ಯ ವಿಕಾಸ ಯೋಜನೆಯಡಿ ತಾಂತ್ರಿಕತೆಯನ್ನು ಅಳವಡಿಸಲು ಹೊಸ ಯೋಜನೆಯನ್ನು ಕೈಬಿಡಲಾಗಿದೆ. ಇದನ್ನು ಜಾರಿ ಮಾಡುವ ಕುರಿತು ಸಿಎಂ ಗಮನಕ್ಕೆ ತರಲಾಗುವುದು ಎಂದರು.

Sneha Gowda

Recent Posts

ಪ್ರಜ್ವಲ್‌ ರೇವಣ್ಣ ಪ್ರಧಾನಿ ಮೋದಿಯವರ ನಿಜವಾದ ಪರಿವಾರ: ಜಿಗ್ನೇಶ್‌ ಮೇವಾನಿ

'ಸುಮಾರು ಮೂರು ಸಾವಿರ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌…

14 mins ago

ರಾಜು ಆಲಗೂರರಿಗೆ ಕುರುಬ ಸಮಾಜದ ಬೆಂಬಲ

ಕುರುಬ ಸಮಾಜ ಯಾವತ್ತೂ ನ್ಯಾಯದ ಪರವಾಗಿದೆ. ಹಾಗಾಗಿ ಯೋಗ್ಯ ಅಭ್ಯರ್ಥಿಯಾದ ರಾಜು ಆಲಗೂರರಿಗೆ ಬೆಂಬಲ ನೀಡುತ್ತದೆ ಎಂದು ಮಾಜಿ ಜಿಪಂ…

1 hour ago

ಹೊಸ ಕಥೆ ಮೂಲಕ ಮತ್ತೆ ಒಟಿಟಿಗೆ ಬರಲಿದೆ ಆ್ಯನಿಮೇಟೆಡ್ ಬಾಹುಬಲಿ – ಕ್ರೌನ್​ ಆಫ್​ ಬ್ಲಡ್​

ಬಾಕ್ಸ್​ ಆಫೀಸ್​ನಲ್ಲಿ ಇತಿಹಾಸ ಸೃಷ್ಟಿಸಿದ್ದ ‘ಬಾಹುಬಲಿ 1’ ಮತ್ತು ‘ಬಾಹುಬಲಿ 2’ ಸಿನಿಮಾಗಳ ಆ್ಯನಿಮೇಟೆಡ್​ ಸೀರಿಸ್​ ಬರುತ್ತಿದೆ. ಇದಕ್ಕೆ ‘ಬಾಹುಬಲಿ:…

1 hour ago

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

2 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

2 hours ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

2 hours ago