ಮಂಗಳೂರು : ಕೋವಿಡ್ ನಿಂದ ತತ್ತರಿಸಿದ ಕೇರಳದಲ್ಲಿ ಈಗ ‘ನಿಪಾ ವೈರಸ್’ ಕಾಟ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ನಿಫಾ ಅಲರ್ಟ್ ಘೋಷಿಸಿದೆ .
ಕೇರಳದಲ್ಲಿ 12 ವರ್ಷದ ಬಾಲಕನೊಬ್ಬ ನಿಪಾ ವೈರಸ್ ಸೋಂಕಿಗೆ ಬಲಿಯಾಗಿದ್ದು, ಆತನಿಗೆ ಚಿಕಿತ್ಸೆ ನೀಡಿದ್ದ ಇಬ್ಬರು ವೈದ್ಯರಿಗೂ ಸೋಂಕು ತಾಗಿದೆ. ಹೀಗಾಗಿ ರಾಜ್ಯದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಸೋಂಕಿಗೀಡಾದ ಬಾವಲಿಗಳು ತಿಂದು ಬಿಟ್ಟಹಣ್ಣನ್ನು ಅನ್ಯ ಪ್ರಾಣಿ ಅಥವಾ ಮನುಷ್ಯರು ಸೇವಿಸಿದಾಗ ನಿಪಾ ವೈರಸ್ ಅಂಟುತ್ತದೆ. ಜೊಲ್ಲು, ಉಗುಳಿನ ಮೂಲಕ ಇತರರಿಗೆ ಹರಡುತ್ತದೆ.