News Karnataka Kannada
Monday, April 29 2024
ಮಂಗಳೂರು

ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ ಶಾಸಕ ಹರತಾಳು ಹಾಲಪ್ಪ

Dharmasthala
Photo Credit : News Kannada

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಸತ್ಯ, ನ್ಯಾಯ, ನೀತಿಗೆ ಹೆಸರಾಗಿದ್ದು, ಶ್ರೀ ಮಂಜುನಾಥ ಸ್ವಾಮಿಯ ಸಮ್ಮುಖದಲ್ಲಿ ನನ್ನ ಆತ್ಮಶುದ್ಧಿ ಹಾಗೂ ಪ್ರಾಮಾಣಿಕತೆಯನ್ನು ಪ್ರದರ್ಶಿಸುವ ಸಲುವಾಗಿ ಮರಳು ಸಾಗಾಣಿಕೆ ಲಾರೀ‌ಮಾಲೀಕರಿಂದ ಹಣ ಪಡೆದಿಲ್ಲ ಎಂದು‌ ಪ್ರಮಾಣ ಮಾಡಿದ್ದೇನೆ‌ ಎಂದು‌ ಶಾಸಕ ಹರತಾಳು ಹಾಲಪ್ಪ ಮಾಧ್ಯಮಗಳಿಗೆ ತಿಳಿಸಿದರು.

ಸಾಗರದ ಹೊಸನಗರ ತಾಲೂಕು ಮರಳು ಸಾಗಾಟ ಮಾಲಿಕರಿಂದ ಕಮಿಷನ್ ಪಡೆದಿದ್ದಾರೆ, ಪಡೆದಿಲ್ಲವಾಗಿದ್ದಲ್ಲಿ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಲಿ ಎಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರೋಪ ಹಾಗೂ ಆಹ್ವಾನದ ಹಿನ್ನೆಲೆ ಸವಾಲು ಸ್ವೀಕರಿಸಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿ ಮಾತನಾಡಿದರು.

ಮಾಜಿ ಶಾಸಕರ ಆಹ್ವಾನದಂತೆ‌ ಆರು ದಿನಗಳ‌ ಮೊದಲೇ ಅವರಿಗೆ ತಿಳುವಳಿಕೆ ಪತ್ರದ ಮೂಲಕ ನೋಟೀಸು ನೀಡಿ ಇಂದಿಗೆ ದಿನ ನಿಗದಿ ಪಡಿಸಲಾಗಿತ್ತು. ಅವರು ದಿನಾಂಕ ಹಾಗೂ  ಸಮಯ ಬದಲಾವಣೆ ಪ್ರಯತ್ನದ ಮೂಲಕ ಜಾರಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಆದರೂ ಇಂದು ಅವರು ಧರ್ಮಸ್ಥಳಕ್ಕೆ ಆಗಮಿಸುವ ಮಾಹಿತಿ ಲಭಿಸಿದೆ. ನಾನು ಹಣ ಪಡೆಯದಿರುವ ಕುರಿತು ಪ್ರಾಮಾಣಿಕವಾಗಿ ಒಪ್ಪಿಕೊಂಡಿದ್ದೇನೆ. ಆದರೆ ಅವರಿಗೆ ಪ್ರಾಮಾಣಿಕವಾಗಿ ಒಪ್ಪಿಕೊಳ್ಳುವ ತಾಕತ್ತಿಲ್ಲ. ನಾನು‌ ಹಣ ಪಡೆದ ಕುರಿತು ಯಾವುದೇ ದಾಖಲೆಗಳಿದ್ದರೆ ನನ್ನ ವಿರುದ್ಧ ಕೇಸ್ ಹಾಕಲಿ‌‌ ಎಂದು ಸವಾಲು ಹಾಕಿದರು. ‌

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
154
Deepak Atavale

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು